ಸಮಾಲೋಚನೆ ಸಭೆಯಲ್ಲಿ ನಾಲ್ಕು ದೇಶಗಳ ಸಚಿವರುಗಳು 
ದೇಶ

ಪ್ರಾದೇಶಿಕ ಸಮಗ್ರತೆ ಮತ್ತು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸಲು ಭಾರತ ಬದ್ಧವಾಗಿದೆ: ಎಸ್.ಜೈಶಂಕರ್

ಚೀನಾಕ್ಕೆ ಮತ್ತೊಮ್ಮೆ ಸೂಕ್ಷ್ಮ ಸಂದೇಶ ರವಾನಿಸಿರುವ ಭಾರತ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ಸಮಗ್ರತೆ ಮತ್ತು ಶಾಂತಿಯುತ ಪರಿಹಾರಗಳ ಮೇಲೆ ನಂಬಿಕೆಯಿಟ್ಟಿದೆ ಎಂದು ಹೇಳಿದೆ.

ನವದೆಹಲಿ: ಚೀನಾಕ್ಕೆ ಮತ್ತೊಮ್ಮೆ ಸೂಕ್ಷ್ಮ ಸಂದೇಶ ರವಾನಿಸಿರುವ ಭಾರತ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ಸಮಗ್ರತೆ ಮತ್ತು ಶಾಂತಿಯುತ ಪರಿಹಾರಗಳ ಮೇಲೆ ನಂಬಿಕೆಯಿಟ್ಟಿದೆ ಎಂದು ಹೇಳಿದೆ.

ಟೋಕ್ಯೋದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕಗಳ ವಿದೇಶಾಂಗ ಸಚಿವರುಗಳ ಸಭೆಯನ್ನುದ್ದೇಶಿಸಿ ಮಾತನಾಡಿ, ನಿಯಮ ಆಧಾರಿತ ಅಂತಾರಾಷ್ಟ್ರೀಯ ಆದೇಶಗಳನ್ನು ಎತ್ತಿಹಿಡಿಯಲು ಭಾರತ ಬದ್ಧವಾಗಿದೆ ಎಂದರು.

ಇಂಡೋ-ಫೆಸಿಫಿಕ್ ಪ್ರದೇಶದಲ್ಲಿ ಮತ್ತು ಪೂರ್ವ ಲಡಾಕ್ ನಲ್ಲಿ ಚೀನಾದ ಆಕ್ರಮಣಕಾರಿ ಮನೋಸ್ಥಿತಿ ಮಧ್ಯೆ,ಅಮೆರಿಕ-ಭಾರತ-ಆಸ್ಟ್ರೇಲಿಯಾ-ಜಪಾನ್ ನಾಲ್ಕು ದೇಶಗಳ ಸಮಾಲೋಚನೆ ನಡೆಯುತ್ತಿದೆ. ಈ ಸಭೆಗೆ ಚೀನಾದ ವಿರೋಧವಿದ್ದು, ಗಡಿ ಪ್ರದೇಶಗಳಲ್ಲಿ ಚೀನಾದ ಅಭಿವೃದ್ಧಿಯನ್ನು ಮಟ್ಟಹಾಕಲು ನಾಲ್ಕು ದೇಶಗಳು ಒಟ್ಟು ಸೇರಿ ಈ ಸಮಾಲೋಚನೆ ಸಭೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇಂಡೋ-ಫೆಸಿಫಿಕ್ ನಲ್ಲಿ ಕಾನೂನುಬದ್ಧ ಮತ್ತು ಪ್ರಮುಖ ಹಿತಾಸಕ್ತಿಗಳನ್ನು ಹೊಂದಿರುವ ಎಲ್ಲಾ ದೇಶಗಳ ಸುರಕ್ಷತೆ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಮುಂದುವರಿಸುವುದು ಆದ್ಯತೆಯಾಗಿ ಉಳಿದಿದೆ ಎಂದು ಜೈಶಂಕರ್ ಪ್ರತಿಪಾದಿಸಿದ್ದಾರೆ.

ಮುಕ್ತ ಮತ್ತು ಅಂತರ್ಗತ ಇಂಡೊ-ಫೆಸಿಫಿಕ್ ಮಾತುಕತೆಯನ್ನು ನಡೆಸಲು ಖಾತರಿಪಡಿಸಬೇಕಾದ ಅಗತ್ಯತೆಯನ್ನು ಕೂಡ ಜೈಶಂಕರ್ ಸಮಾಲೋಚನೆ ಸಭೆಯಲ್ಲಿ ಒತ್ತಿ ಹೇಳಿದರು.

ಚೀನಾವನ್ನು ಸ್ಪಷ್ಟವಾಗಿ ಉಲ್ಲೇಖಿಸಿ, ಜೈಶಂಕರ್, "ಜಾಗತಿಕ ಸಾಂಕ್ರಾಮಿಕತೆಯ ಹೊರತಾಗಿಯೂ, ನಾವು ಇಂದು ಇಲ್ಲಿ ವೈಯಕ್ತಿಕವಾಗಿ ಭೇಟಿಯಾಗುತ್ತಿದ್ದೇವೆ ಎಂದರೆ ಇತ್ತೀಚಿನ ದಿನಗಳಲ್ಲಿ ಗಳಿಸಿರುವ ಈ ಸಮಾಲೋಚನೆಯ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಈ ಸಭೆಯಲ್ಲಿ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್ ಮತ್ತು ಜಪಾನ್‌ನ ತೋಷಿಮಿಟ್ಸು ಮೊಟೆಗಿ ಭಾಗವಹಿಸಿದ್ದರು. ಮುಕ್ತ ಮತ್ತು ಅಂತರ್ಗತ ಇಂಡೋ-ಪೆಸಿಫಿಕ್ ಅನ್ನು ಕಾಪಾಡಿಕೊಳ್ಳುವ ಮಹತ್ವವನ್ನು ರಾಷ್ಟ್ರಗಳು ಒಟ್ಟಾಗಿ ಒಪ್ಪಿಕೊಂಡವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT