ರಾಹುಲ್-ಜೀವನ್ 
ದೇಶ

ಹತ್ರಾಸ್ ಪ್ರಕರಣ: ಜಾತಿ ಹಿಂಸಾಚಾರ ಪ್ರಚೋದಿಸುವ ಸಂಚು, ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು!

ಹತ್ರಾಸ್ ನ ಬೂಲ್ಗರಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ನಿರ್ದಿಷ್ಟ ಜಾತಿಯ ಜನರನ್ನು ಪ್ರಚೋದಿಸಲು ಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಲಖನೌ: ಹತ್ರಾಸ್ ನ ಬೂಲ್ಗರಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ನಿರ್ದಿಷ್ಟ ಜಾತಿಯ ಜನರನ್ನು ಪ್ರಚೋದಿಸಲು ಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾಂಗ್ರೆಸ್ ನಾಯಕ ಶ್ಯೋರಾಜ್ ಜೀವನ್, ಹತ್ರಾಸ್ ಘಟನೆಯನ್ನು ತನ್ನ ರಾಜಕೀಯವನ್ನು ಮುಂದುವರೆಸಲು ಕಾಂಗ್ರೆಸ್ ಬಳಸಿದೆ ಎಂದು ಒಪ್ಪಿಕೊಳ್ಳುತ್ತಿರುವುದು ವೀಡಿಯೊಗಳಲ್ಲಿ ಕಾಣಿಸಿದೆ. ಜಿಲ್ಲೆಯಲ್ಲಿ ಜಾತಿ ಹಿಂಸಾಚಾರವನ್ನು ಉಂಟುಮಾಡುವ ಉದ್ದೇಶದಿಂದ ಅವರು ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಕುಟುಂಬ ಮತ್ತು ಇಡೀ ವಾಲ್ಮೀಕಿ ಸಮುದಾಯವನ್ನು ಪ್ರಚೋದಿಸಲು ಪ್ರಚೋದನಕಾರಿ ಭಾಷೆಯನ್ನು ಬಳಸಿದ್ದಾರೆ.

ಜೀವನ್ ಕೇಂದ್ರ ಸಂಪುಟದಲ್ಲಿ ಮಾಜಿ ರಾಜ್ಯ ಸಚಿವರು ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ.

ವಿಡಿಯೋ ತುಣುಕುಗಳನ್ನು ಆಧರಿಸಿ ದೇಶದ್ರೋಹದ ಆರೋಪದಡಿಯಲ್ಲಿ ಹತ್ರಾಸ್ ಪೊಲೀಸರು ಶ್ಯೋರಾಜ್ ಜೀವನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೂಲತಃ ಅಲಿಗಢದಿಂದ ಬಂದಿರುವ ಜೀವನ್ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ಹೇಳಿಕೊಂಡಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಂಡಿದೆ. ಎಲ್ಲಾ ಆರೋಪಗಳನ್ನು ದಲಿತ ಕಾಂಗ್ರೆಸ್ ನಾಯಕ ಜೀವನ್ ನಿರಾಕರಿಸಿದ್ದಾರೆ. 

ಸೆಪ್ಟೆಂಬರ್ 19ರಂದು ಅಲಿಗಢದ ಜೆಎಲ್ಎನ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದಾಗ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದ ಜೀವನ್, ಹತ್ರಾಸ್ನಲ್ಲಿ ಜಾತಿ ಆಧಾರಿತ ಭಾರಿ ಗಲಭೆಗಳನ್ನು ಉಂಟುಮಾಡಲು ಸಿದ್ಧತೆಗಳು ಪೂರ್ಣಗೊಂಡಿವೆ. ಒಂದು ವೇಳೆ ಗಲಭೆ ಶುರವಾದರೆ ಹಿಂಸಾಚಾರವನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!