ರಣ್ ಜೀತ್ ಬಹದ್ದೂರ್ ಶ್ರೀವಾಸ್ತವ ಕ 
ದೇಶ

ಹತ್ರಾಸ್ ಗ್ಯಾಂಗ್ ರೇಪ್ ಯುವತಿಗೆ ಆರೋಪಿಯೊಂದಿಗೆ ಸಂಬಂಧ ಇತ್ತು: ಬಿಜೆಪಿ ನಾಯಕ

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ಹೇಳಿಕೆ ನೀಡಿದ್ದು, ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿದ್ದಾರೆ.

ಬಾರಾಬಂಕಿ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ಹೇಳಿಕೆ ನೀಡಿದ್ದು, ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿದ್ದಾರೆ.

ಬಾರಾಬಂಕಿಯ ನಾಯಕ ರಣ್ ಜೀತ್ ಬಹದ್ದೂರ್ ಶ್ರೀವಾಸ್ತವ ಅವರ ವಿರುದ್ಧ 44 ಕ್ರಿಮಿನಲ್ ಮೊಕದ್ದಮೆಗಳಿದ್ದು, ಇವರು ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆ ಕುರಿತು ಮಾತನಾಡಿದ್ದಾರೆ. 

19 ವರ್ಷದ ದಲಿತ ಯುವತಿಯ ಮೇಲೆ ಭೀಕರ ದೌರ್ಜನ್ಯ ಎಸಗಿದ ಮೇಲ್ವರ್ಗದ ಯುವಕರು ಮುಗ್ಧರು, ಇದರಲ್ಲಿ ಯುವತಿಯೇ ದಾರಿತಪ್ಪಿದ್ದಳು ಎಂದು ಹೇಳಿದ್ದಾರೆ. ವಿವಾದಾತ್ಮಕವಾಗಿಯೇ ಸುದ್ದಿಯಲ್ಲಿರುವ ರಣ್ ಜೀತ್ ಬಹದ್ದೂರ್ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. 

ಯುವತಿಗೆ ಆರೋಪಿಯೊಂದಿಗೇ ಸಂಬಂಧವಿತ್ತು, ಅದಕ್ಕಾಗಿಯೇ ಆಕೆ  ಕೃಷಿ ಜಮೀನಿಗೆ ಬರಲು ಆರೋಪಿಯನ್ನು ಬರಲು ಹೇಳಿದ್ದರು. ಇಂತಹ ಹೆಣ್ಣುಮಕ್ಕಳೇ ಕಬ್ಬಿನ ಗದ್ದೆ ಹಾಗೂ ಅರಣ್ಯಗಳಲ್ಲಿ ಸಾವನ್ನಪ್ಪುತ್ತಾರೆ ಎಂದು ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆದರೆ ಈ ಯುವಕರು ಮುಗ್ಧರು ಎಂದು ಸ್ಪಷ್ಟವಾಗಿ ಹೇಳಬಲ್ಲೆ, ಸಿಬಿಐ ಚಾರ್ಜ್ ಶೀಟ್ ದಾಖಲಿಸುವವರೆಗೆ ಅವರನ್ನು ಬಿಡುಗಡೆ ಮಾಡಬೇಕು ಅಲ್ಲಿಯವರೆಗೆ ಅವರನ್ನು ಜೈಲಿನಲ್ಲಿರಿಸಿದರೆ ಅವರ ಕಳೆದುಹೋದ ಯೌವನವನ್ನು ಯಾರು ಹಿಂತಿರುಗಿಸುತ್ತಾರೆ? ಸರ್ಕಾರ ಪರಿಹಾರ ನೀಡಲಿದೆಯೇ? ಎಂದು ರಣ್ ಜೀತ್ ಬಹದ್ದೂರ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT