ಅನುರಾಗ್ ಶ್ರೀವಾತ್ಸವ 
ದೇಶ

ಲಿಬಿಯಾದಲ್ಲಿ 7 ಭಾರತೀಯರ ಅಪಹರಣ: ವಿದೇಶಾಂಗ ಸಚಿವಾಲಯ

ಲಿಬಿಯಾದಲ್ಲಿ ಏಳು ಮಂದಿ ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ಲಿಬಿಯಾದಲ್ಲಿ ಏಳು ಮಂದಿ ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. 

ಆಂಧ್ರಪ್ರದೇಶ, ಬಿಹಾರ, ಗುಜರಾತ್ ಮತ್ತು ಉತ್ತರ ಪ್ರದೇಶದಕ್ಕೆ ಸೇರಿದ ಏಳು ಮಂದಿ ಕಳೆದ ತಿಂಗಳು ಅಪಹರಣಕ್ಕೀಡಾಗಿದ್ದಾರೆ. ಸದ್ಯ ಲಿಬಿಯಾ ಅಧಿಕಾರಿಗಳ ಜೊತೆ ಭಾರತ ಸರ್ಕಾರ ನಿರಂತರ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 

ಸೆಪ್ಟೆಂಬರ್ 14 ರಂದು ಭಾರತಕ್ಕೆ ವಿಮಾನ ಹಿಡಿಯಲು ಟ್ರಿಪೊಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಅಶ್ವೆರಿಫ್ ಎಂಬ ಸ್ಥಳದಲ್ಲಿ ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

"ಸರ್ಕಾರವು ಅಪಹರಣಕ್ಕೀಡಾದವರ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ. ಇನ್ನು ಲಿಬಿಯಾದ ಅಧಿಕಾರಿಗಳು ಮತ್ತು ಉದ್ಯೋಗದಾತರೊಂದಿಗೆ ಸಮಾಲೋಚನೆ ಮತ್ತು ಸಮನ್ವಯದಲ್ಲಿದ್ದು ನಮ್ಮ ಭಾರತೀಯರನ್ನು ಪತ್ತೆಹಚ್ಚಲು ಮತ್ತು ಅವರ ಸೆರೆಯಿಂದ ಬೇಗನೆ ಬಿಡುಗಡೆ ಮಾಡಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದರು. 

ಭಾರತೀಯ ಪ್ರಜೆಗಳು ನಿರ್ಮಾಣ ಮತ್ತು ತೈಲ ಸರಬರಾಜು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಶ್ರೀವಾಸ್ತವ ಹೇಳಿದರು.

ಉತ್ತರ ಆಫ್ರಿಕಾದ ತೈಲ ಸಂಪದ್ಭರಿತ ದೇಶವಾದ ಲಿಬಿಯಾ 2011ರಲ್ಲಿ ಮುಅಮ್ಮರ್ ಗಡಾಫಿಯ ನಾಲ್ಕು ದಶಕಗಳ ಆಡಳಿತದ ಪತನದ ನಂತರ ದೊಡ್ಡ ಪ್ರಮಾಣದ ಹಿಂಸಾಚಾರ ಮತ್ತು ಅಶಾಂತಿಗೆ ಸಾಕ್ಷಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT