ರಾಜನಾಥ್ ಸಿಂಗ್ 
ದೇಶ

88ನೇ ಭಾರತೀಯ ವಾಯುಪಡೆ ದಿನ: ಶುಭಾಶಯ ಕೋರಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ದೇಶದ ಹೆಮ್ಮೆಯ ವಾಯುಸೇನೆ ಗುರುವಾರ 88ನೇ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ. 

ನವದೆಹಲಿ: ದೇಶದ ಹೆಮ್ಮೆಯ ವಾಯುಸೇನೆ ಗುರುವಾರ 88ನೇ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ. 

"ಭಾರತೀಯ ವಾಯುಪಡೆ ಸದಾಕಾಲ ದೇಶದ ಆಗಸವನ್ನು ರಕ್ಷಣೆ ಮಾಡುತ್ತದೆ ಎಂಬ ವಿಶ್ವಾಸ ನನಗಿದೆ. ಏನೇ ಬರಲಿ ಸದಾಕಾಲ ನೀಲಿ ಆಕಾಶ, ಸುರಕ್ಷರಿತರಾಗಿ ಇರುವಂತೆ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ. 

ಭಾರತೀಯ ವಾಯುಪಡೆ ದಿನವನ್ನು ಪ್ರಥಮ ಬಾರಿಗೆ 1932, ಅಕ್ಟೋಬರ್‌ 8 ರಂದು ಆಚರಿಸಲಾಯಿತು. ಅಲ್ಲಿಂದ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದ್ದು, ಈ ವರ್ಷ ಭಾರತವು 87ನೇ ವರ್ಷದ ವಾಯುಪಡೆ ದಿನವನ್ನು ಆಚರಿಸುತ್ತಿದೆ.

ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್‌ ವಿಜಯ್‌, ಆಪರೇಷನ್‌ ಮೇಘದೂತ್‌, ಆಪರೇಷನ್‌ ಕ್ಯಾಕ್ಟಸ್‌, ಆಪರೇಷನ್‌ ಪೂಮಲೈ, ಆಪರೇಷನ್‌ ರಾಹತ್‌ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ.

ಇದಲ್ಲದೆ ದೇಶದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ, ಭಯೋತ್ಪಾದಕರ ದಾಳಿ ನಡೆದಾಗ, ಗಲಭೆಗಳು ನಡೆದಾಗ ಪ್ರಾಣಾಪಾಯದಲ್ಲಿರುವ ಜನರನ್ನು ರಕ್ಷಿಸುವ ಕಾರ್ಯವನ್ನೂ ವಾಯುಸೇನೆ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ರಾಜ್ಯದ 470 ಹಳ್ಳಿಗಳಿಗೆ ಮೊಬೈಲ್ ನೆಟ್​ವರ್ಕೇ ಇಲ್ಲ..!

ಮೋದಿ ನಿಜವಾದ ಮುತ್ಸದ್ದಿ: ದೂರದೃಷ್ಟಿ ಹೊಂದಿರುವ ಅದ್ಭುತ ನಾಯಕ; ನಟ ಮೋಹನ್‌ ಲಾಲ್ ಶ್ಲಾಘನೆ

ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು: 'ಇವ ನಮ್ಮವ ಇವ ನಮ್ಮವ' ಮಸೂದೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

SCROLL FOR NEXT