ರಾಜನಾಥ್ ಸಿಂಗ್ 
ದೇಶ

88ನೇ ಭಾರತೀಯ ವಾಯುಪಡೆ ದಿನ: ಶುಭಾಶಯ ಕೋರಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ದೇಶದ ಹೆಮ್ಮೆಯ ವಾಯುಸೇನೆ ಗುರುವಾರ 88ನೇ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ. 

ನವದೆಹಲಿ: ದೇಶದ ಹೆಮ್ಮೆಯ ವಾಯುಸೇನೆ ಗುರುವಾರ 88ನೇ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ. 

"ಭಾರತೀಯ ವಾಯುಪಡೆ ಸದಾಕಾಲ ದೇಶದ ಆಗಸವನ್ನು ರಕ್ಷಣೆ ಮಾಡುತ್ತದೆ ಎಂಬ ವಿಶ್ವಾಸ ನನಗಿದೆ. ಏನೇ ಬರಲಿ ಸದಾಕಾಲ ನೀಲಿ ಆಕಾಶ, ಸುರಕ್ಷರಿತರಾಗಿ ಇರುವಂತೆ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ. 

ಭಾರತೀಯ ವಾಯುಪಡೆ ದಿನವನ್ನು ಪ್ರಥಮ ಬಾರಿಗೆ 1932, ಅಕ್ಟೋಬರ್‌ 8 ರಂದು ಆಚರಿಸಲಾಯಿತು. ಅಲ್ಲಿಂದ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದ್ದು, ಈ ವರ್ಷ ಭಾರತವು 87ನೇ ವರ್ಷದ ವಾಯುಪಡೆ ದಿನವನ್ನು ಆಚರಿಸುತ್ತಿದೆ.

ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್‌ ವಿಜಯ್‌, ಆಪರೇಷನ್‌ ಮೇಘದೂತ್‌, ಆಪರೇಷನ್‌ ಕ್ಯಾಕ್ಟಸ್‌, ಆಪರೇಷನ್‌ ಪೂಮಲೈ, ಆಪರೇಷನ್‌ ರಾಹತ್‌ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ.

ಇದಲ್ಲದೆ ದೇಶದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ, ಭಯೋತ್ಪಾದಕರ ದಾಳಿ ನಡೆದಾಗ, ಗಲಭೆಗಳು ನಡೆದಾಗ ಪ್ರಾಣಾಪಾಯದಲ್ಲಿರುವ ಜನರನ್ನು ರಕ್ಷಿಸುವ ಕಾರ್ಯವನ್ನೂ ವಾಯುಸೇನೆ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT