ಇ ಪಳನಿಸ್ವಾಮಿ 
ದೇಶ

ತಮಿಳು ಶಾಲೆಗಳಲ್ಲಿ ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಯಡಿಯೂರಪ್ಪಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮನವಿ

ಕರ್ನಾಟಕದಲ್ಲಿನ ತಮಿಳು ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಮತ್ತು ಮುಚ್ಚಿರುವ ಶಾಲೆಗಳನ್ನು ಪುನರಾರಂಭಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮನವಿ ಮಾಡಿದ್ದಾರೆ.

ಚೆನ್ನೈ: ಕರ್ನಾಟಕದಲ್ಲಿನ ತಮಿಳು ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಮತ್ತು ಮುಚ್ಚಿರುವ ಶಾಲೆಗಳನ್ನು ಪುನರಾರಂಭಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮನವಿ ಮಾಡಿದ್ದಾರೆ.

ಈ ಸಂಬಂಧ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪಳನಿಸ್ವಾಮಿ ಅವರು, ಸರ್ಕಾರಿ ಮತ್ತು ಅನುದಾನಿತ ಖಾಸಗಿ ಶಾಲೆಗಳಲ್ಲಿ ಖಾಲಿ ಇರುವ ತಮಿಳು ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ತಮ್ಮ ಮಾತೃಭಾಷೆಯಲ್ಲೇ ಓದುವಂತಾಗಲು ಹಿಂದಿನ ವರ್ಷಗಳಲ್ಲಿ ಕರ್ನಾಟಕ ಸರ್ಕಾರ ವಿವಿಧ ಜಿಲ್ಲೆಗಳಲ್ಲಿ ಅನೇಕ ತಮಿಳು ಶಾಲೆಗಳನ್ನು ಆರಂಭಿಸಿದೆ. ಖಾಸಗಿ ತಮಿಳು ಶಾಲೆಗಳನ್ನು ತೆರೆಯಲು ಒಪ್ಪಿಗೆ ನೀಡಿದೆ ಮತ್ತು ಕರ್ನಾಟಕ ಸರ್ಕಾರ ಅನುದಾನವನ್ನೂ ನೀಡಿದೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತಮಿಳು ಶಿಕ್ಷಕರ ಹುದ್ದೆಗಳು ಖಾಲಿ ಇವೆ ಮತ್ತು ಹೊಸ ಖಾಸಗಿ ತಮಿಳು ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ ಎಂಬ ವಿಚಾರವನ್ನು ಕರ್ನಾಟಕ ತಮಿಳು ಶಾಲೆ ಮತ್ತು ಕಾಲೇಜು ಶಿಕ್ಷಕರ ಸಂಘ, ತಮಿಳುನಾಡು ಸರ್ಕಾರದ ಗಮನಕ್ಕೆ ತಂದಿದೆ. ಹೀಗಾಗಿ ತಮಿಳು ಶಿಕ್ಷಕರ ನೇಮಕಕ್ಕೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಪಳನಿಸ್ವಾಮಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT