ಹತ್ರಾಸ್ ರೇಪ್ ಪ್ರಕರಣದ ಸಂತ್ರಸ್ತೆಯ ಅಂತ್ಯ ಸಂಸ್ಕಾರ ನೆರವೇರಿಸುತ್ತಿರುವ ಪೊಲೀಸರು (ಸಂಗ್ರಹ ಚಿತ್ರ) 
ದೇಶ

ಹತ್ರಾಸ್ ಪ್ರಕರಣ: ಸಂತ್ರಸ್ತೆಯ ಸಹೋದರ, ತಾಯಿಯಿಂದಲೇ ಕೊಲೆ; ಪ್ರಮುಖ ಆರೋಪಿಯಿಂದ ಎಸ್ ಪಿಗೆ ಪತ್ರ!

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ :ಪ್ರಮುಖ ಆರೋಪಿ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಹೋದರ ಮತ್ತು ತಾಯಿಯೇ 19 ವರ್ಷದ ತಮ್ಮ ಮಗಳನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ. 

ನವದೆಹಲಿ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಹೋದರ ಮತ್ತು ತಾಯಿಯೇ 19 ವರ್ಷದ ತಮ್ಮ ಮಗಳನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ. 

ನಾಲ್ವರೂ ಆರೋಪಿಗಳೂ ಈ ಪತ್ರಕ್ಕೆ ಸಹಿ ಹಾಕಿದ್ದು, ಈ ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ, ಆದರೂ ಸಹ ನಮ್ಮನ್ನು ವಿನಾ ಕಾರಣ ಈ ಪ್ರಕರಣದಲ್ಲಿ ಸುಳ್ಳು ಆರೋಪಗಳೊಂದಿಗೆ ಸಿಲುಕಿಸಲಾಗುತ್ತಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ. 

ಸಂದೀಪ್, ರಾಮು, ಲವಕುಶ್ ಹಾಗೂ ರವಿ ಅವರುಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರ ಬರೆದಿದ್ದು, ಹೆಬ್ಬೆಟ್ಟು ಹಾಕಿದ್ದಾರೆ. 

ಸಂತ್ರಸ್ತೆಯ ಪರಿಚಯ ನನಗೆ ಇತ್ತು. ಆಕೆಯೊಂದಿಗೆ ದೀರ್ಘಕಾಲದಿಂದಲೂ ಸಂಪರ್ಕದಲ್ಲಿದ್ದೆ. ಆದರೆ ಈ ಕೊಲೆ ಅಥವಾ ಅತ್ಯಾಚಾರವನ್ನು ನಾನು ಮಾಡಿಲ್ಲ. ನಾನು ಸಂತ್ರಸ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆಕೆಯ ಸಾವಿಗೆ ಆಕೆಯ ಸಹೋದರ ಹಾಗೂ ತಾಯಿಯೇ ಕಾರಣ, ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ ಎಂದು ಆರೋಪಿ ಸಂದೀಪ್ ಪತ್ರದಲ್ಲಿ ತಿಳಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT