ಕುಲಭೂಷಣ್ ಜಾದವ್ 
ದೇಶ

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕ್ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು: ಭಾರತ

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್‌ಗೆ ಸಂಬಂಧಿಸಿದ ಪ್ರಕರಣದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಪಾಕಿಸ್ತಾನ ವಿಫಲವಾಗಿದೆ ಎಂದು ಭಾರತ ಹೇಳಿದ್ದು ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ಆದೇಶದಂತೆ ಅಡ್ಡಿ ಆತಂಕ ಇಲ್ಲದ ದೂತಾವಾಸದ ಪ್ರವೇಶಕ್ಕೆ ಒತ್ತಾಯಿಸಿದೆ.

ನವದೆಹಲಿ: ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್‌ಗೆ ಸಂಬಂಧಿಸಿದ ಪ್ರಕರಣದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಪಾಕಿಸ್ತಾನ ವಿಫಲವಾಗಿದೆ ಎಂದು ಭಾರತ ಹೇಳಿದ್ದು ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ಆದೇಶದಂತೆ ಅಡ್ಡಿ ಆತಂಕ ಇಲ್ಲದ ದೂತಾವಾಸದ ಪ್ರವೇಶಕ್ಕೆ ಒತ್ತಾಯಿಸಿದೆ.

ಪಾಕಿಸ್ತಾನದ ನ್ಯಾಯಾಲಯವು ಕುಲಭೂಷಣ್ ಮರಣದಂಡನೆ ವಿರುದ್ಧ ಪರಿಶೀಲನಾ ಅರ್ಜಿಯನ್ನು ವಿಚಾರಣೆಗೆ ಒಳಪಡಿಸುತ್ತಿದೆ.

ಈ ಪ್ರಕರಣದಲ್ಲಿ ಜಾಧವ್ ಅವರನ್ನು ಪ್ರತಿನಿಧಿಸಲು ಭಾರತೀಯ ವಕೀಲರೊಬ್ಬರನ್ನು ನೇಮಕ ಮಾಡುವಂತೆ ಭಾರತ ಒತ್ತಡ ಹೇರುತ್ತಿದ್ದು, 2019ರಲ್ಲಿ ತೀರ್ಪಿನಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಆದೇಶಿಸಿದಂತೆ ಆತನಿಗೆ ಅಡ್ಡಿಯಿಲ್ಲದೆ ದೂತಾವಾಸದ ಪ್ರವೇಶ ಕೋರಿದೆ.

"ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನ ವಿಫಲವಾಗಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒದಗಿಸುವುದು ಮತ್ತು ಅವರಿಗೆ ಯಾವುದೇ ಅಡೆತಡೆಯಿಲ್ಲದ, ಬೇಷರತ್ತಾದ ಮತ್ತು ಅಡೆತಡೆಯಿಲ್ಲದ ದೂತವಾಸ ಪ್ರವೇಶವನ್ನು ಒದಗಿಸಬೇಕಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಈ ಪ್ರಕರಣದಲ್ಲಿ ಜಾಧವ್ ಅವರನ್ನು ಪ್ರತಿನಿಧಿಸಲು ವಕೀಲರನ್ನು ನೇಮಕ ಮಾಡಲು ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಅಧಿಕಾರಿಗಳು ಇಸ್ಲಾಮಾಬಾದ್ ಹೈಕೋರ್ಟ್‌ಗೆ(ಐಎಚ್‌ಸಿ) ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT