ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ ಬಿಜೆಪಿ ಶಾಸಕರ ಪುತ್ರಿಯಿಂದ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲು

ಮಧ್ಯ ಪ್ರದೇಶದ ಬಿಜೆಪಿ ಶಾಸಕ ಸೀತಾರಾಮ್ ಆದಿವಾಸಿ ಅವರ ಪುತ್ರಿ, ತಮ್ಮ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಹಿಂಸೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಶಿಯೋಪುರ: ಮಧ್ಯ ಪ್ರದೇಶದ ಬಿಜೆಪಿ ಶಾಸಕ ಸೀತಾರಾಮ್ ಆದಿವಾಸಿ ಅವರ ಪುತ್ರಿ, ತಮ್ಮ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಹಿಂಸೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಶಾಸಕರ ಪುತ್ರಿ ಐದು ವರ್ಷಗಳ ಹಿಂದೆ ಶಿಯೋಪುರದ ಕರಾಹಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಯಾಪುರ ಗ್ರಾಮದ ಸೋನು ಆದಿವಾಸಿ ಅವರೊಂದಿಗೆ ವಿವಾಹವಾಗಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

"ಶಾಸಕ ಸೀತಾರಾಮ್ ಆದಿವಾಸಿ ಅವರ ಮಗಳು, ಪತಿ ವಿರುದ್ಧ ದೂರು ನೀಡಿದ್ದು, ದೂರಿನ ಅದರ ಆಧಾರದ ಮೇಲೆ ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ ಮತ್ತು ಇತರ ಸಂಬಂಧಿತ ಸೆಕ್ಷೆನ್ ಅಅಡಿ, ಪತಿ, ಅತ್ತೆ ಮತ್ತು ಮಾವನ ವಿರುದ್ಧ ಕೇಸ್ ದಾಖಲಿಸಲಾಗಿದೆ" ಎಂದು ಕರಾಹಲ್ ಪೊಲೀಸ್ ಠಾಣೆಯ ಅಧಿಕಾರಿ ರಾಜೇಶ್ ಶರ್ಮಾ ತಿಳಿಸಿದ್ದಾರೆ.

ತನ್ನ ಪತಿ ಕಳೆದ ಎರಡು ವರ್ಷಗಳಿಂದ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಶಾಸಕರ ಪುತ್ರಿ ದೂರಿನಲ್ಲಿ ಆರೋಪಿಸಿರುವುದಾಗಿ ಶರ್ಮಾ ಹೇಳಿದ್ದಾರೆ.

ಪತಿ ತನ್ನಿಂದ ಬೈಕು ಮತ್ತು ಹಣಕ್ಕೆ ಬೇಡಿಕೆಯಿಟ್ಟಿದ್ದರು. ಒಂದು ವೇಳೆ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮನೆಯಲ್ಲಿ ಇರಲು ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಶಾಸಕರ ಪುತ್ರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ತದನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ-MEA

Census 2027: ಜಾತಿ, ಕೋವಿಡ್ ಲಸಿಕೆ, ಆಧಾರ್‌ ಸೇರಿ 40 ಪ್ರಶ್ನೆಗಳಿಗೆ ಉತ್ತರಿಸಬೇಕು! ಜನಗಣತಿ ವೇಳೆ ಯಾವೆಲ್ಲಾ ಐಡಿಗಳು ಬೇಕು ಗೊತ್ತಾ?

‘ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ’: ಬಾರ್ ಕೌನ್ಸಿಲ್‌ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ

ಸ್ವಾತಂತ್ರ್ಯೋತ್ಸವದ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿ ಹೈಕೋರ್ಟ್-ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, ಹೆಚ್ಚಿದ ಆತಂಕ..!