ಸಾಂದರ್ಭಕ ಚಿತ್ರ 
ದೇಶ

ವಂದೇ ಭಾರತ್ ಮಿಷನ್ ಅಡಿ 20 ಲಕ್ಷ ಭಾರತೀಯರು ಸ್ವದೇಶಕ್ಕೆ: ಹರ್ ದೀಪ್ ಸಿಂಗ್ ಪುರಿ

ಕೊರೋನಾ ಸೋಂಕು ಸಂಕಷ್ಟ ಸಂದರ್ಭದಲ್ಲಿ ಜಾರಿಗೊಳಿಸಲಾದ ವಂದೇ ಭಾರತ್ ಮಿಷನ್ ಅಡಿ ಈವರೆಗೆ 20 ಲಕ್ಷ ಭಾರತೀಯರನ್ನು ವಿದೇಶಗಳಿಂದ ಭಾರತಕ್ಕೆ ಕರೆತರಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕು ಸಂಕಷ್ಟ ಸಂದರ್ಭದಲ್ಲಿ ಜಾರಿಗೊಳಿಸಲಾದ ವಂದೇ ಭಾರತ್ ಮಿಷನ್ ಅಡಿ ಈವರೆಗೆ 20 ಲಕ್ಷ ಭಾರತೀಯರನ್ನು ವಿದೇಶಗಳಿಂದ ಭಾರತಕ್ಕೆ ಕರೆತರಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು ಗುರುವಾರ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಂದೇ ಭಾರತ್ ಮಿಷನ್ ಅಡಿ ನಾಗರಿಕ ವಿಮಾನ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ಇದಾಗಿದ್ದು, ಸಂಕಷ್ಟ ಸಂದರ್ಭದಲ್ಲಿ ಜನರನ್ನಷ್ಟೇ ಅಲ್ಲ, 120 ದೇಶಗಳಿಗೆ ಔಷಧಿಯನ್ನೂ ಸಹ ಪೂರೈಕೆ ಮಾಡಲಾಗಿದೆ. ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ವಿಶ್ವದ ಬೇರೆ ಬೇರೆ ಭಾಗಗಳಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವಲ್ಲಿ ಏರ್ ಇಂಡಿಯಾ ಪ್ರಮುಖ ಪಾತ್ರ ನಿರ್ವಹಿಸಿದೆ ಎಂದರು.

ಮೊದಲ ಹಂತದಲ್ಲಿ 64 ದೇಶಗಳಿಂದ 12, 708 ಜನರನ್ನು ಕರೆತರಲಾಯಿತು. ಕ್ರಮೇಣ ಈ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಯಿತು. ವಿದೇಶಗಳಲ್ಲಿರುವವರನ್ನು ಸ್ವದೇಶಕ್ಕೆ ಕರೆತರಲು ನಡೆಸಿದ ಅಭಿಯಾನ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ ಎಂದು ಸಚಿವ ಪುರಿ ಮೆಚ್ಚುಗೆ ವ್ಯಕ್ತಪಡಿಸಿದಸಿದರು.

ವಿದೇಶಗಳಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವಲ್ಲಿ ವಿದೇಶಾಂಗ ಸಚಿವಾಲಯದ ಕೊಡುಗೆ ಅಪಾರವಾಗಿದೆ. ಸಚಿವಾಲಯ ಈ ಸಂಬಂಧ ಜನರಿಂದ ಮನವಿಗಳನ್ನು ಸ್ವೀಕರಿಸಿ ಮಾಹಿತಿ ಕಲೆ ಹಾಕಿತ್ತು. ನಮ್ಮವರನ್ನು ಕರೆತರಲು 16 ದೇಶಗಳೊಂದಿಗೆ ತಾತ್ಕಾಲಿಕ ವಾಯುಯಾನ ಒಪ್ಪಂದ ಮಾಡಿಕೊಳ್ಳಲಾಯಿತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT