ಪದ್ಮನಾಭಸ್ವಾಮಿ ದೇವಸ್ಥಾನ 
ದೇಶ

ಕೇರಳ: ಪದ್ಮನಾಭಸ್ವಾಮಿಯ 10 ಅರ್ಚಕರಿಗೆ ಕೊರೋನಾ ಪಾಸಿಟಿವ್, ದೇವಸ್ಥಾನ ಬಂದ್

ಕೇರಳದ ತಿರುವನಂತಪುರಂನ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ 10 ಅರ್ಚಕರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅಕ್ಟೋಬರ್ 15 ರವರೆಗೆ ದೇವಸ್ಥಾನ ಬಂದ್ ಮಾಡಲಾಗಿದೆ.

ತಿರುವನಂತಪುರಂ: ಕೇರಳದ ತಿರುವನಂತಪುರಂನ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ 10 ಅರ್ಚಕರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅಕ್ಟೋಬರ್ 15 ರವರೆಗೆ ದೇವಸ್ಥಾನ ಬಂದ್ ಮಾಡಲಾಗಿದೆ.

ದೇವಾಲಯದ ಅಧಿಕಾರಿಗಳ ಪ್ರಕಾರ, ದೈನಂದಿನ ಪೂಜೆಯನ್ನು ತಂತ್ರಿಗಳು ನಡೆಸುತ್ತಾರೆ. ಆದರೆ ಅಕ್ಟೋಬರ್ 15 ರವರೆಗೆ ದೇವಾಲಯ ಪ್ರವೇಶಿಸಲು ಭಕ್ತರಿಗೆ ಅನುಮತಿ ಇಲ್ಲ.

ಲಾಕ್ ಡೌನ್ ನಂತರ ಆಗಸ್ಟ್ 27ರಿಂದ ದೇವಾಲಯವನ್ನು ಮತ್ತೆ ತೆರೆಯಲಾಗಿದ್ದು, ಒಂದು ಬಾರಿಗೆ 35 ಭಕ್ತರು ದೇವಾಲಯ ಪ್ರವೇಶಿಸಲು ಅನುಮತಿ ನೀಡಲಾಗಿತ್ತು ಮತ್ತು ಒಂದು ದಿನದಲ್ಲಿ ಒಟ್ಟು 665 ಭಕ್ತರು ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿತ್ತು.

ದೇವಾಲಯ ಮತ್ತೆ ತೆರೆದ ನಂತರ ದೇವಸ್ಥಾನದ ಹಲವು ಸಿಬ್ಬಂದಿ ಮತ್ತು ಅರ್ಚಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈಗ ದೇವಸ್ಥಾವನ್ನು ಮತ್ತೆ ಕೆಲವು ದಿನಗಳವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT