ಅಂತಿಮ ವಿಧಿ ವಿಧಾನ ನೆರವೇರಿಸುತ್ತಿರುವ ಚಿರಾಗ್ ಪಾಸ್ವಾನ್ 
ದೇಶ

ಸಕಲ ಸರ್ಕಾರಿ ಗೌರವದೊಂದಿಗೆ ರಾಮ್ ವಿಲಾಸ್ ಪಾಸ್ವಾನ್ ಅಂತ್ಯಸಂಸ್ಕಾರ

ರಾಜ್ಯ ಸರ್ಕಾರದ ಗೌರವಾದರಗಳೊಂದಿಗೆ ಎಲ್ ಜೆಪಿ ಸ್ಥಾಪಕ ಮತ್ತು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥಿವ ಶರೀರ ಶನಿವಾರ ಅಗ್ನಿಯಲ್ಲಿ ಲೀನವಾಯಿತು. ದೀಘಾ ಘಾಟ್ ನಲ್ಲಿ ರಾಮ್ ವಿಲಾಸ್ ಅವರ ಪುತ್ರ ಚಿರಾಗ್ ಪಾಸ್ವನ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಪಾಟ್ನಾ: ರಾಜ್ಯ ಸರ್ಕಾರದ ಗೌರವಾದರಗಳೊಂದಿಗೆ ಎಲ್ ಜೆಪಿ ಸ್ಥಾಪಕ ಮತ್ತು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥಿವ ಶರೀರ  ಶನಿವಾರ ಅಗ್ನಿಯಲ್ಲಿ ಲೀನವಾಯಿತು. ದೀಘಾ ಘಾಟ್ ನಲ್ಲಿ ರಾಮ್ ವಿಲಾಸ್ ಅವರ ಪುತ್ರ ಚಿರಾಗ್ ಪಾಸ್ವನ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ಸುಶೀಲ್ ಶಿಂಧೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಆರ್ ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. 

ಇದಕ್ಕೂ ಮುನ್ನ ರಾಮ್ ವಿಲಾಸ್ ಪಾಸ್ವಾನ್ ಅವರ ನಿವಾಸದಲ್ಲಿ ಬಳಿ ನೆರೆದಿದ್ದ ಅಪಾರ ಸಂಖ್ಯೆಯ ಜನರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು.

ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಪಾಟ್ನಾಕ್ಕೆ ಶುಕ್ರವಾರ ತರಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT