ಅತ್ಯಾಚಾರದ ಆರೋಪಿಗೆ ಕಾಂಗ್ರೆಸ್ ಟಿಕೆಟ್: ವಿರೋಧಿಸಿದ ಮಹಿಳಾ ಕಾರ್ಯಕರ್ತೆಗೆ ಸ್ವಪಕ್ಷೀಯರಿಂದಲೇ ಥಳಿತ 
ದೇಶ

ಅತ್ಯಾಚಾರದ ಆರೋಪಿಗೆ ಕಾಂಗ್ರೆಸ್ ಟಿಕೆಟ್: ವಿರೋಧಿಸಿದ ಮಹಿಳಾ ಕಾರ್ಯಕರ್ತೆಗೆ ಸ್ವಪಕ್ಷೀಯರಿಂದಲೇ ಥಳಿತ

ಅತ್ಯಾಚಾರದ ಆರೋಪಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದನ್ನು ವಿರೋಧಿಸಿದ ಮಹಿಳಾ ಕಾರ್ಯಕರ್ತೆಗೆ ಸ್ವಪಕ್ಷೀಯರೇ ಥಳಿಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. 

ಡಿಯೋರಿಯಾ​: ಅತ್ಯಾಚಾರದ ಆರೋಪಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದನ್ನು ವಿರೋಧಿಸಿದ ಮಹಿಳಾ ಕಾರ್ಯಕರ್ತೆಗೆ ಸ್ವಪಕ್ಷೀಯರೇ ಥಳಿಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. 

ಉತ್ತರ ಪ್ರದೇಶದ ಉಪಚುನಾವಣೆಗೆ ಸ್ಪರ್ಧಿಸಲು ಮುಕುಂದ್ ಭಾಸ್ಕರ್ ಎಂಬಾತನಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಆದರೆ ಆತನ ವಿರುದ್ಧ ಅತ್ಯಾಚಾರದ ಆರೋಪವಿದ್ದು, ಟಿಕೆಟ್ ನೀಡಿದ್ದನ್ನು ಕಾಂಗ್ರೆಸ್ ಕಾರ್ಯಕರ್ತೆ ತಾರಾ ಯಾದವ್ ಪ್ರತಿಭಟಿಸಿದ್ದರು. ಈ ಹಂತದಲ್ಲಿ ಅವರ ಮೇಲೆ ಸ್ವಪಕ್ಷೀಯರೇ ಥಳಿಸಿ ಹಲ್ಲೆ ನಡೆಸಿದ್ದಾರೆ. 

ಅತ್ಯಾಚಾರದ ಆರೋಪಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿದ್ದಕ್ಕಾಗಿ ನನ್ನ ಮೇಲೆ ಹಲ್ಲೆ ನಡೆದಿದೆ. ಈಗ ನಾನು ಪ್ರಿಯಾಂಕಾ ಗಾಂಧಿ ಕ್ರಮ ಕೈಗೊಳ್ಳುವುದಕ್ಕಾಗಿ ಕಾಯುತ್ತಿದ್ದೇನೆ ಎಂದು ತಾರಾ ಯಾದವ್ ಎಎನ್ಐ ಗೆ ಹೇಳಿದ್ದಾರೆ. 

ತಾರಾ ಯಾದವ್ ಮೇಲೆ ನಡೆದಿರುವ ಹಲ್ಲೆಗೆ ಪಕ್ಷಾತೀತವಾಗಿ ಖಂಡನೆ ವ್ಯಕ್ತವಾಗಿದೆ. ತಾರಾ ಯಾದವ್ ಮೇಲೆ ನಡೆದ ಹಲ್ಲೆ ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಗೌರವ ಎಷ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಬಿಜೆಪಿ ಪ್ರತಿಕ್ರಿಯೆ ನೀಡಿದ್ದರೆ, ಘಟನೆಯನ್ನು ಖಂಡಿಸಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ರಾಷ್ಟ್ರೀಯ ಮಹಿಳಾ ಆಯೋಗ ಈ ಘಟನೆಯನ್ನು ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT