ಸಂಗ್ರಹ ಚಿತ್ರ 
ದೇಶ

ಸಾಲು ಸಾಲು ಹಬ್ಬಗಳು, ಚಳಿಗಾಲದಲ್ಲಿ ಕೋವಿಡ್‌ ಪ್ರಕರಣಗಳ ಏರಿಕೆ: ಡಾ. ಹರ್ಷವರ್ಧನ್‌ ಎಚ್ಚರಿಕೆ

ದೇಶದಲ್ಲಿ ಕೋವಿಡ್‌ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌, ಚಳಿಗಾಲದ ಅವಧಿಯಲ್ಲಿ ಇದು ಇನ್ನೂ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ.

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌, ಚಳಿಗಾಲದ ಅವಧಿಯಲ್ಲಿ ಇದು ಇನ್ನೂ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ.

ವಾರದ ಸಾಮಾಜಿಕ ಜಾಲತಾಣಗಳ ಕಾರ್ಯಕ್ರಮ 'ಸಂವಾದ'ದಲ್ಲಿ ಪಾಲ್ಗೊಂಡ ಅವರು, ಕೊರೋನಾ ವೈರಸ್ ಶ್ವಾಸಕೋಶದ ವೈರಸ್ ಆಗಿದ್ದು, ತಂಪು ವಾತಾವರಣದಲ್ಲಿ ಉಸಿರಾಟದ ವೈರಸ್ ಹರಡುವುದು ಹೆಚ್ಚಾಗುತ್ತದೆ. ತಂಪು ಹವಾಮಾನ ಮತ್ತು ಕಡಿಮೆ ಆರ್ದ್ರತೆಯ ಸ್ಥಿತಿಯಲ್ಲಿ ಶ್ವಾಸಕೋಶದ ವೈರಸ್‌ಗಳು ಹೆಚ್ಚಾಗುತ್ತದೆ. 

ನೆನಪಿನಲ್ಲಿಟ್ಟುಕೊಳ್ಳಬೇಕಾದ ಇನ್ನೊಂದು ಸಂಗತಿಯೆಂದರೆ, ಚಳಿಗಾಲದ ಸಮಯದಲ್ಲಿ, ವಸತಿ ನಿವಾಸಗಳಲ್ಲಿ ಜನದಟ್ಟಣೆ ಹೆಚ್ಚಾಗುವ ಪ್ರವೃತ್ತಿ ಇದೆ. ಇದು ಸೋಂಕಿನ ಪ್ರಸರಣವನ್ನು ಹೆಚ್ಚಿಸಬಹುದು. ಆದ್ದರಿಂದ ಭಾರತದ ಚಳಿಗಾಲದ ಋತುವಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆಗಳನ್ನು ತಳ್ಳಿ ಹಾಕಲಾಗದು ಎಂದಿದ್ದಾರೆ.

ಇದೇ ವೇಳೆ, ಸಾಲು ಸಾಲು ಹಬ್ಬಗಳು ಸಹ ಬರುತ್ತಿದೆ. ಜನರು ಹೆಚ್ಚಾಗಿ ಒಂದೇ ಕಡೆ ಸೇರುವ ಸಾಧ್ಯತೆಗಳು ಹೆಚ್ಚಾಗಿದೆ. ಈ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಅನುಸರಿಸದೆ ಹೋದರೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT