ಕೇಂದ್ರ ಸಚಿವ ಜಿತೇಂದ್ರ ಸಿಂಗ್ 
ದೇಶ

ಭಾರತದ ಬಾಹ್ಯಾಕಾಶ ಪಯಣದಲ್ಲಿ ಸಾಗಲು ಖಾಸಗಿ ಕಂಪೆನಿಗಳಿಗೆ ಎಲ್ಲ ರೀತಿಯ ಅವಕಾಶ: ಡಾ. ಜಿತೇಂದ್ರ ಸಿಂಗ್

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಖಾಸಗಿ ವಲಯಕ್ಕೆ ತನ್ನ ಸೌಲಭ್ಯಗಳನ್ನು ತೆರೆಯಲು ಸಜ್ಜಾಗಿದೆ.

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಖಾಸಗಿ ವಲಯಕ್ಕೆ ತನ್ನ ಸೌಲಭ್ಯಗಳನ್ನು ತೆರೆಯಲು ಸಜ್ಜಾಗಿದೆ.

ಕೇಂದ್ರ ಪರಮಾಣು ಇಂಧನ ಮತ್ತು ಬಾಹ್ಯಾಕಾಶ ಖಾತೆ (ಸ್ವತಂತ್ರ) ಸಚಿವ ಜಿತೇಂದ್ರ ಸಿಂಗ್ ಭಾನುವಾರ ಈ ವಿಷಯ ತಿಳಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಾಹ್ಯಾಕಾಶ ಇಲಾಖೆಯಲ್ಲಿ ಐತಿಹಾಸಿಕ ಸುಧಾರಣೆಗಳನ್ನು ತೆಗೆದುಕೊಂಡಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಗ್ರಹಗಳ ಪರಿಶೋಧನೆ ಮತ್ತು ಬಾಹ್ಯಾಕಾಶ ಅನ್ವೇಷನೆಗಳಲ್ಲಿ ಮುಂದಿನ ಯೋಜನೆಗಳು ಖಾಸಗಿ ವಲಯಕ್ಕೆ ಮುಕ್ತವಾಗುತ್ತವೆ ಎಂದು ಅವರು ಹೇಳಿದ್ದಾರೆ. ಇದು ಸ್ವಾವಲಂಬಿ ಭಾರತದತ್ತ ಮೋದಿ ಸರ್ಕಾರದ ‘ಆತ್ಮ ನಿರ್ಭರ್’ ಮಾರ್ಗಸೂಚಿಯ ಒಂದು  ಭಾಗವಾಗಿದೆ. ಇದು ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉಪಕ್ರಮವನ್ನು ರೂಪಿಸಿದೆ ಎಂದು ಅವರು ಹೇಳಿದ್ದಾರೆ.

ಹೊಸ ಸುಧಾರಣೆಗಳು ದೇಶದ ಬಾಹ್ಯಾಕಾಶ ಸಂಬಂಧಿತ ಚಟುವಟಿಕೆಗಳನ್ನು ‘ಪೂರೈಕೆ ಆಧಾರಿತ ಮಾದರಿ’ ಯಿಂದ ‘ಬೇಡಿಕೆ ಆಧಾರಿತ ಮಾದರಿ’ ಗೆ ಬದಲಾಯಿಸಲು ಪ್ರಯತ್ನಿಸುತ್ತವೆ ಎಂದ ಅವರು, ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ದೃಢೀಕರಣ ಕೇಂದ್ರ (ಐಎನ್-ಸ್ಪೇಸ್) ರಚನೆಯೊಂದಿಗೆ  ಕಾರ್ಯವಿಧಾನವೊಂದು ಜಾರಿಯಲ್ಲಿರುತ್ತದೆ. ಖಾಸಗಿ ವಲಯ, ಇಸ್ರೋ ಸೌಲಭ್ಯಗಳು ಮತ್ತು ಇತರ ಸಂಬಂಧಿತ ಸ್ವತ್ತುಗಳನ್ನು ಅವುಗಳ ಸಾಮರ್ಥ್ಯವನ್ನು ಸುಧಾರಿಸುವಂತೆ ಬಳಸಲು ಅನುಮತಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಖಾಸಗಿ ಉದ್ಯಮಗಲು ತಮ್ಮ ಅರ್ಜಿಗಳನ್ನು ಸಲ್ಲಿಸಲು ವೆಬ್ ಲಿಂಕ್ ಒದಗಿಸಲಾಗಿದೆ. ಉದ್ಯಮಗಳು ಮತ್ತು ನವೋದ್ಯಮಗಳಿಂದ ಪಡೆದ ಅರ್ಜಿಗಳನ್ನು ಉನ್ನತ ಮಟ್ಟದ ಸಮಿತಿಯಿಂದ ಪ್ರಕ್ರಿಯೆಗೊಳಿಸಲಾಗುವುದು ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆ

SCROLL FOR NEXT