ಅಸಾದುದ್ದೀನ್ ಓವೈಸಿ 
ದೇಶ

ಮುಸ್ಲಿಮರ ಸಂತೋಷ ಆಳೆಯುವ ಮಾನದಂಡವೇನು? ಅಸದುದ್ದೀನ್ ಒವೈಸಿ ಪ್ರಶ್ನೆ

ಪ್ರಪಂಚದಲ್ಲಿಯೇ ಭಾರತೀಯ ಮುಸ್ಲಿಮರು ಅತ್ಯಂತ ಸಂತೋಷವಾಗಿದ್ದಾರೆ. ಎಂಬ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಎಂ ಐ ಎಂ   ಸಂಸದ ಅಸದುದ್ದೀನ್ ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಪ್ರಪಂಚದಲ್ಲಿಯೇ ಭಾರತೀಯ ಮುಸ್ಲಿಮರು ಅತ್ಯಂತ ಸಂತೋಷವಾಗಿದ್ದಾರೆ. ಎಂಬ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಎಂ ಐ ಎಂ   ಸಂಸದ ಅಸದುದ್ದೀನ್ ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಮರ ಸಂತೋಷ ಅಳೆಯಲು ಬಳಸುವ  ಮಾನದಂಡವೇನು? ಅತ್ಯಂತ  ಸಂತೋಷವಾಗಿರಲು ನಾವು (ಮುಸ್ಲಿಮರು) ಇತರ ಮುಸ್ಲಿಂ ರಾಷ್ಟ್ರಗಳೊಂದಿಗೆ ಪೈಪೋಟಿ ನಡೆಸುವುದಿಲ್ಲ. ನಿಮ್ಮ ಆರ್ ಎಸ್ ಎಸ್ ಸಿದ್ಧಾಂತಗಳ ಮೂಲಕ ದೇಶದಲ್ಲಿ  ಮುಸ್ಲಿಮರನ್ನು ಎರಡನೇ ದರ್ಜೆ  ನಾಗರೀಕರನ್ನಾಗಿಸಬೇಕು ಎಂದು ಕೊಂಡಿದ್ದೀರಾ? ದೇಶದ ಬಹುಸಂಖ್ಯಾತ ಸಮುದಾಯಗಳಿಗೆ ಮುಸ್ಲಿಮರು ಎಷ್ಟು ಕೃತಜ್ಞರಾಗಿರಬೇಕು ಎಂಬುದನ್ನು ನೀವು (ಭಾಗವತ್)ನಮಗೆ ಹೇಳುವ ಅಗತ್ಯವಿಲ್ಲ. 

ಬಹುಸಂಖ್ಯಾತ ಸಮುದಾಯದ ದಯೆ ದಾಕ್ಷಿಣ್ಯವನ್ನು ನಾವು ಅವಲಂಬಿಸುವುದಿಲ್ಲ. ನಮ್ಮ ಮೂಲಭೂತ ಹಕ್ಕುಗಳು ನಮಗೆ ಮುಖ್ಯ. ನಮ್ಮನ್ನು  ಗೌರವಿಸುತ್ತಾರಾ ಎಂಬುದೇ ನಮ್ಮ ಸಂತೋಷಕ್ಕೆ, ನಮ್ಮ ಗೌರವದ ಅಳತೆಯಾಗಿದೆ  ಎಂದು ಅಸದುದ್ದೀನ್ ಒವೈಸಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT