ಟಿಆರ್ ಪಿ ಹಗರಣ: ವಿಚಾರಣೆಗೆ ರಿಪಬ್ಲಿಕ್ ಟಿವಿ ಸಿಇಒ ಹಾಜರು 
ದೇಶ

ಟಿಆರ್ ಪಿ ಹಗರಣ: ವಿಚಾರಣೆಗೆ ರಿಪಬ್ಲಿಕ್ ಟಿವಿ ಸಿಇಒ ಹಾಜರು 

ಟಿಆರ್ ಪಿ ರೇಟಿಂಗ್ ನ್ನು ತಿರುಚಿದ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಚಾರಣೆಗೆ ಹಾಜರಾಗಿದ್ದಾರೆ. 

ಮುಂಬೈ: ಟಿಆರ್ ಪಿ ರೇಟಿಂಗ್ ನ್ನು ತಿರುಚಿದ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಚಾರಣೆಗೆ ಹಾಜರಾಗಿದ್ದಾರೆ. 

ಮುಂಬೈ ನ ಕ್ರೈಮ್ ಬ್ರಾಂಚ್ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿ ಅವರನ್ನು ವಿಚಾರಣೆಗೊಳಪಡಿಸಿದೆ. ಲಾಭಕ್ಕಾಗಿ ಟಿಆರ್ ಪಿ ರೇಟಿಂಗ್ ನ್ನು ತಿರುಚಿದ ಪ್ರಕರಣ ಬಹಿರಂಗಗೊಂಡಿದ್ದು ಮೂರು ಟಿವಿ ಚಾನಲ್ ವಿರುದ್ಧ ಆರೋಪ ಕೇಳಿಬಂದಿದೆ. ಈ ಪೈಕಿ ಎರಡು ಟಿವಿ ಚಾನಲ್ ನವರನ್ನು ಬಂಧಿಸಿದ್ದಾರೆ. 

ಈ ನಡುವೆ ರಿಪಬ್ಲಿಕ್ ಚಾನಲ್ ನ ಸಿಎಫ್ಒ ಶಿವ ಸುಬ್ರಹ್ಮಣಿಯಮ್ ಸುಂದರಮ್ ಅವರಿಗೂ ಸಹ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಲಾಗಿತ್ತು. 

ಫಕ್ತ್ ಮರಾಠಿ, ಬಾಕ್ಸ್ ಸಿನಿಮಾ ಚಾನಲ್ ನವರೂ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ದೇಶದಲ್ಲೇ ಅತಿ ಹೆಚ್ಚು ಟಿಆರ್ ಪಿಯನ್ನು ಹೊಂದಿರುವ ಚಾನಲ್ ಎಂದು ರಿಪಬ್ಲಿಕ್ ಹೇಳುತ್ತದೆ. ಆದರೆ ಸುಶಾಂತ್ ಸಿಂಗ್ ರಜ್ಪೂತ್ ಪ್ರಕರಣದಲ್ಲಿ ಪೊಲೀಸರ ಪಾತ್ರವನ್ನು ಪ್ರಶ್ನಿಸಿದ್ದಕ್ಕಾಗಿ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ರಿಪಬ್ಲಿಕ್ ಚಾನಲ್ ಹೇಳಿದೆ. 


ಅರ್ನಬ್ ಗೋಸ್ವಾಮಿ ಈ ಬಗ್ಗೆ ಮಾತನಾಡಿದ್ದು ಮುಂಬೈ ಪೊಲೀಸ್ ಮುಖ್ಯಸ್ಥರು ಸಾರ್ವಕನಿಕವಾಗಿ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ. ಪೊಲೀಸ್ ಸಮನ್ಸ್ ಜಾರಿಗೊಳಿಸಿರುವುದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿರುವುದಾಗಿ ರಿಪಬ್ಲಿಕ್ ಚಾನಲ್ ನ ಸಿಎಫ್ಒ ಶಿವ ಸುಬ್ರಹ್ಮಣಿಯಮ್ ಸುಂದರಮ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT