ರಾಜನಾಥ್ ಸಿಂಗ್ 
ದೇಶ

ಲಡಾಖ್ ಸಂಘರ್ಷ: ಪಾಕ್ ನಂತರ ಚೀನಾದ ಕುತಂತ್ರ ಎಂದ ರಾಜನಾಥ್ ಸಿಂಗ್

ಪಾಕಿಸ್ತಾನದ ನಂತರ ಚೀನಾ ಕೂಡ ಭಾರತದ ಗಡಿಯಲ್ಲಿ ವಿವಾದವನ್ನು ಸೃಷ್ಟಿಸುತ್ತಿದೆ, ಅದು "ಕುತಂತ್ರದ" ಒಂದು ಭಾಗ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನದ ನಂತರ ಚೀನಾ ಕೂಡ ಭಾರತದ ಗಡಿಯಲ್ಲಿ ವಿವಾದವನ್ನು ಸೃಷ್ಟಿಸುತ್ತಿದೆ, ಅದು "ಕುತಂತ್ರದ" ಒಂದು ಭಾಗ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಕಳೆದ ಐದು ತಿಂಗಳಿಂದ ಪೂರ್ವ ಲಡಾಖ್ ನಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ಸಂಘರ್ಷ ನಡೆಯುತ್ತಿದ್ದು, ಈ ಘರ್ಷಣೆ ಹಿಂದೆ ಭಾರೀ ಕುತಂತ್ರವಿರುವ ಬಗ್ಗೆ ರಕ್ಷಣಾ ಸಚಿವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇಂದು ಏಳು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಾರ್ಡರ್ ರೋಡ್ ಆರ್ಗನೈಸೇಶನ್ (ಬಿಆರ್‌ಒ) ನಿರ್ಮಿಸಿದ 44 ಸೇತುವೆಗಳನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ರಕ್ಷಣಾ ಸಚಿವರು, ಭಾರತವನ್ನು ಕೆಣಕುವ ಉದ್ಶೇಶದಿಂದಲೇ ಈ ಘರ್ಷಣೆಗೆ ಇಂಬು ನೀಡಲಾಗುತ್ತಿದೆ ಎಂದರು.

ಭಾರತದ ಗಡಿಗಳಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಿ ಭಾರತವನ್ನು ಕಟ್ಟಿಹಾಕಲು ಪಾಕ್-ಚೀನಾ ಜಂಟಿ ಪ್ರಯತ್ನ ನಡೆಸುತ್ತಿದ್ದು, ಇದರ ಭಾಗವಾಗಿಯೇ ಲಡಾಖ್ ಗಡಿಯಲ್ಲಿ ಸಮಸ್ಯೆ ಸೃಷ್ಟಿಸಲಾಗಿದೆ ಎಂದು ರಾಜನಾಥ್ ಸಿಂಗ್ ಆರೋಪಿಸಿದರು.

ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಪ್ರಚೋದಿತ ದಾಳಿಗಳು ನಿರಂತರವಾಗಿದ್ದು, ಇದೀಗ ಚೀನಾ ಕೂಡ ಲಡಾಖ್ ಗಡಿಯಲ್ಲಿ ಕ್ಯಾತೆ ತೆಗೆದಿದೆ. ಈ ವಿದ್ಯಮಾನಗಳನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಯನ್ನು ಸೃಷ್ಟಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ'- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಬಳ್ಳಾರಿ ಆಳಲು ಹೊರಟ ಪಾಳೇಗಾರರ ಮಧ್ಯೆ ವಿಜೃಂಭಿಸಿದ ಗನ್ ಸಂಸ್ಕೃತಿ (ನೇರ ನೋಟ)

ಮನ್ರೇಗಾ ಯೋಜನೆ ಮರು ಜಾರಿಗೆ ಆಗ್ರಹ: ಕೇಂದ್ರದ ವಿರುದ್ಧ ಸಿಡಿದೆದ್ದ ರಾಜ್ಯ ಸರ್ಕಾರ, ನಿರ್ಣಯ ಅಂಗೀಕರಿಸಲು ಶೀಘ್ರದಲ್ಲೇ ವಿಶೇಷ ಅಧಿವೇಶನ ಕರೆಯಲು ನಿರ್ಧಾರ

SCROLL FOR NEXT