ನಿರ್ಮಲಾ ಸೀತಾರಾಮನ್ 
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ 10 ಸಾವಿರ ರೂ. ಹಬ್ಬದ ಮುಂಗಡ; ಎಲ್ ಟಿಸಿ ಬದಲು ನಗದು ವೋಚರ್: ನಿರ್ಮಲಾ ಸೀತಾರಾಮನ್ 

ಆರ್ಥಿಕತೆಯಲ್ಲಿ ಬೇಡಿಕೆ ಹೆಚ್ಚಿಸಲು, ಗ್ರಾಹಕರ ಖರ್ಚು ಶಕ್ತಿ ಹೆಚ್ಚಿಸಲು ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ 10 ಸಾವಿರ ರೂಪಾಯಿ ಬಡ್ಡಿ ರಹಿತ ಹಬ್ಬದ ಮುಂಗಡ ಯೋಜನೆಯನ್ನು ಘೋಷಿಸಿದೆ. 

ನವದೆಹಲಿ: ಆರ್ಥಿಕತೆಯಲ್ಲಿ ಬೇಡಿಕೆ ಹೆಚ್ಚಿಸಲು, ಗ್ರಾಹಕರ ಖರ್ಚು ಶಕ್ತಿ ಹೆಚ್ಚಿಸಲು ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ 10 ಸಾವಿರ ರೂಪಾಯಿ ಬಡ್ಡಿ ರಹಿತ ಹಬ್ಬದ ಮುಂಗಡ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಅ.12 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಯೋಜನೆಯನ್ನು 6 ನೇ ವೇತನ ಆಯೋಗದಿಂದ  ನಿಲ್ಲಿಸಲಾಗಿದೆ. ಆದರೆ ಈ ಬಾರಿ ವಿಶೇಷವಾಗಿ ಕೇಂದ್ರ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಬಡ್ಡಿ ರಹಿತ ಮುಂಗಡವನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. 

ರುಪೇ ಕಾರ್ಡ್ ರೂಪದಲ್ಲಿ 10 ಸಾವಿರ ರೂಪಾಯಿ ಮುಂಗಡ ದೊರೆಯಲಿದ್ದು, ಮಾ.31, 2021 ವರೆಗೂ ಇದನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಈ ಹಣವನ್ನು 10 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದ್ದು, ಕೇಂದ್ರ ಸರ್ಕಾರ ಇದಕ್ಕಾಗಿ 4,000 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. 

ಇನ್ನು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನೀಡಲಾಗುವ ಎಲ್ ಟಿಸಿಯ ಬದಲಾಗಿ ಈ ಬಾರಿ ನಗದು ವೋಚರ್ ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

ಕೇಂದ್ರ ಸರ್ಕಾರದ ಉದ್ಯೋಗಿಗಳು ತಾವು ಬಯಸುವ ಪ್ರದೇಶಗಳಿಗೆ ಭೇಟಿ ನೀಡಲು ಹಾಗೂ ಒಮ್ಮೆ ತಮ್ಮ ಊರಿಗೆ ತೆರಳುವ ವೆಚ್ಚವನ್ನು ಎಲ್ ಟಿಸಿ ರೂಪದಲ್ಲಿ ಪಡೆಯುತ್ತಿದ್ದರು. ಆದರೆ ಈ ಬಾರಿ ಕೋವಿಡ್-19 ಕಾರಣದಿಂದಾಗಿ ಪ್ರಯಾಣ ಸೂಕ್ತವಲ್ಲದ ಹಿನ್ನೆಲೆಯಲ್ಲಿ ಎಲ್ ಟಿಸಿ ಬದಲಿಗೆ ನಗದು ವೋಚರ್ ಗಳನ್ನು ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 

ನಗದು ವೋಚರ್ ಗಳನ್ನು ಆಹಾರಯೇತರ, ಶೇ.12 ಹಾಗೂ ಹೆಚ್ಚಿನ ಜಿಎಸ್ ಟಿ ರೇಟೆಡ್ ಉತ್ಪನ್ನಗಳನ್ನು ಖರೀದಿಸಲು ಮಾತ್ರ ಬಳಕೆ ಮಾಡಬಹುದಾಗಿದ್ದು, ಜಿಎಸ್ ಟಿ ನೋಂದಾಯಿತ ಔಟ್ ಲೆಟ್ ಗಳಲ್ಲಿ ಡಿಜಿಟಲ್ ಮೋಡ್ ನಲ್ಲೇ ಪಾವತಿ ಮಾಡಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT