ದೇಶ

ಕೊರೋನಾ ಗೆದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು!

Vishwanath S

ನವದೆಹಲಿ: ಭಾರತದಲ್ಲಿ ಕೊರೋನಾ ಚೇತರಿಕೆ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರ ನಡುವೆ ಕೊರೋನಾಗೆ ತುತ್ತಾಗಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹ ಚೇತರಿಸಿಕೊಂಡಿದ್ದಾರೆ. 

ಸೆಪ್ಟೆಂಬರ್ 19ರಂದು ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ವೆಂಕಯ್ಯ ನಾಯ್ಡು ಅವರನ್ನು ಹೋಂ ಕ್ವಾರಂಟೈನ್ ನಲ್ಲಿರಿಸಿ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. 

ವೆಂಕಯ್ಯ ನಾಯ್ಡು ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಕೊರೋನಾ ಪರೀಕ್ಷೆ ನಡೆಸಿದ್ದಾರೆ. ಪ್ರಸ್ತುತ ವರದಿಯಲ್ಲಿ ನಾಯ್ಡು ಅವರ ಪರೀಕ್ಷೆ ನೆಗೆಟಿವ್ ಬಂದಿದೆ. ಈ ಸಂಬಂಧ ಮಾಹಿತಿ ನೀಡಿರುವ ವೈದ್ಯರು ಶೀಘ್ರದಲ್ಲೇ ನಾಯ್ಡು ಅವರು ರಾಜಕೀಯದಲ್ಲಿ ಸಕ್ರೀಯರಾಗಲಿದ್ದಾರೆ ಎಂದರು. 

SCROLL FOR NEXT