ಪ್ರಿಯಾಂಕಾ ಗಾಂಧಿ 
ದೇಶ

ಭತ್ತದ ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡದಿದ್ದರೆ ತೀವ್ರ ಪ್ರತಿಭಟನೆ: ಯೋಗಿ ಸರ್ಕಾರಕ್ಕೆ ಪ್ರಿಯಾಂಕಾ ಎಚ್ಚರಿಕೆ

ರೈತರ ಭತ್ತದ ಬೆಳೆಗೆ ಸೂಕ್ತ ಖರೀದಿ ದರವನ್ನು ಉತ್ತರ ಪ್ರದೇಶ ಸರ್ಕಾರ ನಿಗದಿಪಡಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ತೀವ್ರ ಪ್ರತಿಭಟನೆ ಕೈಗೊಳ್ಳಲಿದೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.

ನವದೆಹಲಿ: ರೈತರ ಭತ್ತದ ಬೆಳೆಗೆ ಸೂಕ್ತ ಖರೀದಿ ದರವನ್ನು ಉತ್ತರ ಪ್ರದೇಶ ಸರ್ಕಾರ ನಿಗದಿಪಡಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ತೀವ್ರ ಪ್ರತಿಭಟನೆ ಕೈಗೊಳ್ಳಲಿದೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದ ಉಸ್ತುವಾರಿಯೂ ಆಗಿರುವ ಅವರು, ‘ಭತ್ತದ ಖರೀದಿ ಪ್ರಮಾಣ ರಾಜ್ಯದಲ್ಲಿ ತೀವ್ರವಾಗಿ ಕುಸಿದಿದೆ. ರೈತರು ಆತಂಕದಲ್ಲಿಇದ್ದಾರೆ’ ಎಂದು ಟೀಕಿಸಿದ್ದಾರೆ.

ಅಲ್ಪಪ್ರಮಾಣದಲ್ಲಿ ಖರೀದಿ ಪ್ರಕ್ರಿಯೆ ನಡೆದಿದೆ. ಖರೀದಿ ದರವೂ ಕಡಿಮೆ ಇದೆ. ಇಂಥ ಸ್ಥಿತಿಯಲ್ಲಿ ತೇವಾಂಶದ ಹೆಸರಿನಲ್ಲಿ ರೈತರನ್ನು ಶೋಷಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗೋಧಿಗಿಂತಲೂ ಭತ್ತದ ದರ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.

ಉತ್ತರ ಪ್ರದೇಶ ಸರ್ಕಾರ ತಕ್ಷಣೇ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವು ತೀವ್ರ ಹೋರಾಟವನ್ನು ಆರಂಭಿಸಲಿದೆ ಎಂದು ಎಚ್ಚರಿಸಿದರು. ಇತ್ತಿಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT