ಸಿಬಿಐ ಅಧಿಕಾರಿಗಳು 
ದೇಶ

ಹತ್ರಾಸ್ ಪ್ರಕರಣ: ಮೃತಳ ಪೋಷಕರು ಮತ್ತು ಗ್ರಾಮಸ್ಥರ ಹೇಳಿಕೆಗಳನ್ನು ದಾಖಲಿಸಿದ ಸಿಬಿಐ

ಹತ್ರಾಸ್ ಸಂತ್ರಸ್ತೆಯ ಕುಟುಂಬದ ಮತ್ತು ಅನೇಕ ಗ್ರಾಮಸ್ಥರ ಹೇಳಿಕೆಗಳನ್ನು ಮಂಗಳವಾರ ದಾಖಲಿಸಿರುವ ಕೇಂದ್ರ ತನಿಖಾ ದಳ(ಸಿಬಿಐ), ಸಂತ್ರಸ್ತೆಯ ಮನೆ ಮತ್ತು ಶವ ಸಂಸ್ಕಾರ ಮಾಡಿದ ಜಾಗವನ್ನು ವಿಡಿಯೋ ಚಿತ್ರೀಕರಣವನ್ನೂ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಹತ್ರಾಸ್: ಹತ್ರಾಸ್ ಸಂತ್ರಸ್ತೆಯ ಕುಟುಂಬದ ಮತ್ತು ಅನೇಕ ಗ್ರಾಮಸ್ಥರ ಹೇಳಿಕೆಗಳನ್ನು ಮಂಗಳವಾರ ದಾಖಲಿಸಿರುವ ಕೇಂದ್ರ ತನಿಖಾ ದಳ(ಸಿಬಿಐ), ಸಂತ್ರಸ್ತೆಯ ಮನೆ ಮತ್ತು ಶವ ಸಂಸ್ಕಾರ ಮಾಡಿದ ಜಾಗವನ್ನು ವಿಡಿಯೋ ಚಿತ್ರೀಕರಣವನ್ನೂ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳಂತೆ, ಒಂಬತ್ತು ಸದಸ್ಯರ ಸಿಬಿಐ ತಂಡ, ಸುಮಾರು 40 ಗ್ರಾಮಸ್ಥರ ಹೇಳಿಕೆಗಳನ್ನು ದಾಖಲಿಸಿದೆ. ಸಂತ್ರೆಸ್ತೆಯ ಗ್ರಾಮ ಮತ್ತು ಅಪರಾಧ ನಡೆದ ಸ್ಥಳಗಳನ್ನೂ ತಂಡ ಪರಿಶೀಲಿಸಿದೆ. ಇಂದಿನ ತನಿಖೆಯ ಸಮಯದಲ್ಲಿ, ಸಂತ್ರಸ್ತೆಯ ತಾಯಿ ಇದ್ದಕ್ಕಿದ್ದಂತೆ ಕುಸಿದು ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಕೆ ಈಗ ಆರೋಗ್ಯದಿಂದ ಇದ್ದಾರೆ. ಈ ಮಧ್ಯೆ, ಹತ್ರಾಸ್ ಟೋಲ್ ಪ್ಲಾಜಾದಲ್ಲಿ ಉತ್ತರ ಪ್ರದೇಶ ಪೋಲಿಸರು ಬಂಧಿಸಿರುವ ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಇತರ ಮೂವರನ್ನು ವಿಚಾರಣೆ ನಡೆಸಲು ಮಥುರಾ ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ.

ಬಂಧಿತರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜೊತೆ ನಂಟು ಹೊಂದಿದ್ದು, ಹತ್ರಾಸ್ ಗ್ರಾಮದ ವಾತಾವರಣವನ್ನು ಕಲುಷಿತಗೊಳಿಸಲು ಆಗಮಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

19 ವರ್ಷದ ದಲಿತ ಬಾಲಕಿಯನ್ನು ಕಳೆದ ತಿಂಗಳು ಹತ್ರಾಸ್ ಗ್ರಾಮದ ನಾಲ್ಕು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಆರೋಪವಿದೆ. ಈ ಘಟನೆ ಇಡೀ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT