ದೇಶ

ನಕಲಿ ಟಿಆರ್‌ಪಿ: ರಿಪಬ್ಲಿಕ್ ಟಿವಿಯ ಇಬ್ಬರು ಹಿರಿಯ ಸಂಪಾದಕರು ತನಿಖಾಧಿಕಾರಿಗಳ ಮುಂದೆ ಹಾಜರು

ನಕಲಿ ಟಿಆರ್‌ಪಿ ದಂಧೆ ಪ್ರಕರಣದಲ್ಲಿ ಹೇಳಿಕೆಗಳನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಕಾರ್ಯನಿರ್ವಾಹಕ ಸಂಪಾದಕ ನಿರಂಜನ್ ನಾರಾಯಣಸ್ವಾಮಿ ಮತ್ತು ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಅಭಿಷೇಕ್ ಕಪೂರ್ ಬುಧವಾರ ಮುಂಬೈ ಅಪರಾಧ ಶಾಖೆಯ ಅಧಿಕಾರಿಗಳ ಮುಂದೆ ಹಾಜರಾದರು.  

ಮುಂಬೈ: ನಕಲಿ ಟಿಆರ್‌ಪಿ ದಂಧೆ ಪ್ರಕರಣದಲ್ಲಿ ಹೇಳಿಕೆಗಳನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಕಾರ್ಯನಿರ್ವಾಹಕ ಸಂಪಾದಕ ನಿರಂಜನ್ ನಾರಾಯಣಸ್ವಾಮಿ ಮತ್ತು ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಅಭಿಷೇಕ್ ಕಪೂರ್ ಬುಧವಾರ ಮುಂಬೈ ಅಪರಾಧ ಶಾಖೆಯ ಅಧಿಕಾರಿಗಳ ಮುಂದೆ ಹಾಜರಾದರು.  

ನಾರಾಯಣಸ್ವಾಮಿ ಮಧ್ಯಾಹ್ನ 12 ಗಂಟೆಗೆ ಅಪರಾಧ ಗುಪ್ತಚರ ಘಟಕ (ಸಿಐಯು) ಕಚೇರಿಯನ್ನು ತಲುಪಿದ್ದರೆ, ದೆಹಲಿ ಮೂಲದ ಕಪೂರ್ ಸಂಜೆ 4 ಗಂಟೆ ಸುಮಾರಿಗೆ ತಲುಪಿದ್ದಾರೆ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಕ್ಟೋಬರ್ 10 ರಂದು ರಿಪಬ್ಲಿಕ್ ಟಿವಿ ಹನ್ಸಾ ರಿಸರ್ಚ್ ಗ್ರೂಪ್ ಗೆ  ಸೇರಿದ ಡಾಕ್ಯುಮೆಂಟರಿಯನ್ನು ಪ್ರಸಾರ ಮಾಡಿತು. ಮಂಗಳವಾರ ನಾರಾಯಣಸ್ವಾಮಿ ಮತ್ತು ಕಪೂರ್ ಅವರಿಗೆ ನೀಡಿದ ಸಮನ್ಸ್, ನಲ್ಲಿ ದಂಧೆಗೆ ಸಂಬಂಧಿಸಿದಂತೆ  "ನಂಬಲು ಸಮಂಜಸವಾದ ಆಧಾರಗಳಿವೆ" ಅವರು "ದಾಖಲೆಯ ಕೆಲವು ಸಂಗತಿಗಳು ಮತ್ತು ಸಂದರ್ಭಗಳನ್ನು ಬಹಿರಂಗಪಡಿಸಿದ್ದಾರೆ", ಆದ್ದರಿಂದ ಅವರ ಹೇಳಿಕೆಗಳನ್ನು ದಾಖಲಿಸುವುದು ಅವಶ್ಯಕವಾಗಿದೆ ಎಂದು ಹೇಳಿತ್ತು.

ರಿಪಬ್ಲಿಕ್ ಟಿವಿ ಟ್ವೀಟ್ ನಲ್ಲಿ,  "ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್ ನಮ್ಮ ಕಾರ್ಯನಿರ್ವಾಹಕ ಸಂಪಾದಕ ನಿರಂಜನ್ ನಾರಾಯಣಸ್ವಾಮಿ ಮತ್ತು ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಅಭಿಷೇಕ್ ಕಪೂರ್ ಅವರ ಬೆನ್ನಿಗೆ ಬೆಂಬಲವಾಗಿ ನಿಂತಿದೆ. ರಿಪಬ್ಲಿಕ್ ತನ್ನ ವರದಿಯನ್ನು ಮಾಡಲು ಮತ್ತು ಮೂಲಗಳ ರಕ್ಷಿಸಲು  ಮಾಧ್ಯಮಗಳ ಹಕ್ಕಿಗೆ ಸಂಪೂರ್ಣವಾಗಿ ಬದ್ದವಿದೆ" ಎಂದಿದೆ. 

ಪ್ರಕರಣಕ್ಕೆ ಸಂಬಂಧಿಸಿ ಅಪರಾಧ ವಿಭಾಗವು ಈವರೆಗೆ ಐದು ಜನರನ್ನು ಬಂಧಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT