ಖುಷ್ಬು 
ದೇಶ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಟಿ ಖುಷ್ಬೂ ವಿರುದ್ಧ '30 ಠಾಣೆಗಳಲ್ಲಿ' ದೂರು ದಾಖಲು!

ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ನಟಿ ಖುಷ್ಬೂ ಅವರ ವಿರುದ್ಧ ಬುಧವಾರ ದೂರು ದಾಖಲಾಗಿದೆ.

ನವದೆಹಲಿ: ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ನಟಿ ಖುಷ್ಬೂ ಅವರ ವಿರುದ್ಧ ಬುಧವಾರ ದೂರು ದಾಖಲಾಗಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ಪಕ್ಷ ಬೌದ್ಧಿಕವಾಗಿ ದುರ್ಬಲ ಪಕ್ಷ ಎಂದು ಟೀಕಿಸಿದ್ದರು. ಇದೀಗ ಇದೇ ಹೇಳಿಕೆಗೆ ಸಂಬಂಧಿಸಿದಂತೆ ಖುಷ್ಬೂ ಅವರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.  ನಟಿ ಖುಷ್ಬೂ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಭರದಲ್ಲಿ ಅಂಗವಿಕಲರನ್ನು ಹೀಗಳೆದು ಮಾತನಾಡಿದ್ದಾರೆ ಎಂದು ಆರೋಪಿಸಿ ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ ದೂರು ದಾಖಲು ಮಾಡಿದೆ. 

ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆಯ ಕಾರ್ಯದರ್ಶಿ ಮುರಳೀಧರನ್ ಅವರು ಚೆನ್ನೈ, ಕಾಂಜಿಪುರಂ, ಚೆಂಗಲ್‌ಪೇಟೆ, ಮಧುರೈ, ಕೊಯಮತ್ತೂರು, ತಿರುಪುರ್ ಸೇರಿದಂತೆ 30 ಠಾಣೆಗಳಲ್ಲಿ ದೂರು ದಾಖಲು ಮಾಡಿದ್ದಾರೆ. ಈ ಪೈಕಿ ಹಲವು ದೂರುಗಳು ಆನ್ ಲೈನ್ ನಲ್ಲಿ ಸಲ್ಲಿಕೆಯಾಗಿದೆ. ಅಂತೆಯೇ ಒಂದು  ದೂರನ್ನು ನೇರವಾಗಿ ಚೆನ್ನೈ ಪೊಲೀಸ್ ಕಮಿಷನರ್ ಕಚೇರಿಯಲ್ಲೇ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಟಿ ಖುಷ್ಬೂ ಅವರು ಓರ್ವ ರಾಜಕಾರಣಿಯಾಗಿದ್ದು, ಅವರಿಗೆ ಅವರ ವಿರೋಧಿಗಳನ್ನು ಅಥವಾ ಎದುರಾಳಿಗಳನ್ನು ಟೀಕಿಸುವ ಹಕ್ಕಿದೆ. ಆದರೆ ಅವರು ಯಾರನ್ನೋ ಟೀಕಿಸುವ ಭರದಲ್ಲಿ ಅಂಗವಿಕಲರನ್ನು ಹೀಗಳೆಯುವ ಹಕ್ಕು ಅವರಿಗಿಲ್ಲ. ಅವರು ಮಾಡಿರುವ ಪದ ಬಳಕೆಗಳು ಅಂಗವಿಕಲರ ಮಾನಸಿಕ ಸ್ಥೈರ್ಯ  ಕುಸಿಯುವಂತಿದೆ. ಅಂತೆಯೇ ಅಂಗವಿಕಲರನ್ನು ನಕಾರಾತ್ಮಕವಾಗಿ ನೋಡುವ ಆಂತಕವಿದೆ. ಇದು ನಿಜಕ್ಕೂ ಸಹಿಸಲಸಾಧ್ಯ. ಇಂತಹ ಕೃತ್ಯಗಳನ್ನು ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ ಖಂಡಿಸುತ್ತದೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇದು ಮತ್ತೊಬ್ಬರಿಗೆ  ಮಾದರಿಯಾಗಬೇಕು ಎಂದು ಮುರಳೀಧರನ್ ಅವರು ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT