ಸಂಗ್ರಹ ಚಿತ್ರ 
ದೇಶ

ಬಿಹಾರ ಚುನಾವಣೆ: ಚುನಾವಣಾ ಸಮೀಕ್ಷೆ ಬ್ಯಾನ್; ಜ್ಯೋತಿಷಿ, ವಿಶ್ಲೇಷಕರ ಮುನ್ಸೂಚನೆಯೂ ಪ್ರಸಾರ ಮಾಡುವಂತಿಲ್ಲ!

ಚುನಾವಣಾ ಸಮೀಕ್ಷೆಗಳ ನಿಷೇಧವಿರುವಾಗ ಜ್ಯೋತಿಷಿ, ವಿಶ್ಲೇಷಕರ ಮುನ್ಸೂಚನೆಯನ್ನೂ ಕೂಡ ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಗುರುವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಚುನಾವಣಾ ಸಮೀಕ್ಷೆಗಳ ನಿಷೇಧವಿರುವಾಗ ಜ್ಯೋತಿಷಿ, ವಿಶ್ಲೇಷಕರ ಮುನ್ಸೂಚನೆಯನ್ನೂ ಕೂಡ ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಗುರುವಾರ ಸ್ಪಷ್ಟಪಡಿಸಿದೆ.

ಈ ಕುರಿತಂತೆ ನಿಬಂಧನೆಗಳನ್ನು ಹೊರಡಿಸಿರುವ ಚುನಾವಣಾ ಆಯೋಗ, 'ಚುನಾವಣೆ ಸಮೀಕ್ಷೆಗಳ ಮೇಲೆ ನಿರ್ಬಂಧವಿರುವಾಗ ಮಾಧ್ಯಮಗಳಲ್ಲಿ ಜ್ಯೋತಿಷಿಗಳು, ಸಂಖ್ಯಾಶಾಸ್ತ್ರಜ್ಞರು, ವಿಶ್ಲೇಷಕರ ಮೂಲಕ ಸೋಲು ಗೆಲುವಿನ ಮುನ್ಸೂಚನೆಯನ್ನು ಕೂಡ ಪ್ರಸಾರ ಮಾಡುವುದೂ ನಿಯಮಬಾಹಿರ ಎಂದು ಚುನಾವಣಾ  ಆಯೋಗ ಗುರುವಾರ ಸ್ಪಷ್ಟಪಡಿಸಿದೆ. 2020ರ ಅಕ್ಟೋಬರ್ 28 ರಂದು (ಬುಧವಾರ) ಬೆಳಿಗ್ಗೆ 7 ಮತ್ತು ನವೆಂಬರ್ 7 ರಂದು ಸಂಜೆ 6.30ರ ನಡುವಿನ ನಿಷೇಧಿತ ಅವಧಿಯಲ್ಲಿ ಫಲಿತಾಂಶಕ್ಕೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮ ಅಥವಾ ಲೇಖನವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ  (ಎಲೆಕ್ಟ್ರಾನಿಕ್–ಮುದ್ರಣ ) ಚುನಾವಣಾ ಆಯೋಗ ಸೂಚಿಸಲಾಗಿದೆ

ಬಿಹಾರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇದೇ 28ರಿಂದ ಆರಂಭವಾಗಲಿದೆ. ಅದಕ್ಕೂ ಮೊದಲು ಗುರುವಾರ ಚುನಾವಣೆ ಆಯೋಗ ಸಲಹೆ ಸೂಚನೆಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಿದೆ. ಎಲೆಕ್ಟ್ರಾನಿಕ್ ಮತ್ತು ಮುದ್ರಣಗಳು ಮುಕ್ತ, ನ್ಯಾಯಸಮ್ಮತ ಚುನಾವಣೆಗಾಗಿ ಇಂಥಹ ಕಾರ್ಯಕ್ರಮನ್ನು  ಪ್ರಸಾರ ಮಾಡುವುದನ್ನು ತಡೆಯಬೇಕು, ಯಾವುದೇ ವ್ಯಕ್ತಿ ಯಾವುದೇ ಮಾದರಿಯಲ್ಲಿ ಮತಗಟ್ಟೆ ಸಮೀಕ್ಷೆ ನಡೆಸಬಾರದು. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಅದನ್ನು ಪ್ರಕಟಿಸಲು ಅಥವಾ ಪ್ರಚಾರ ಮಾಡಲು ಪ್ರಯತ್ನಿಸಬಾರದು ಎಂದು ಆಯೋಗ ತಿಳಿಸಿದೆ.

2017ರ ಮಾರ್ಚ್‌ 30ರಂದು ಮೊದಲ ಬಾರಿಗೆ ಸಮೀಕ್ಷೆಗಳ ಕುರಿತು ಸಲಹೆ ಸೂಚನೆಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಜನ ಪ್ರಾತಿನಿಧಿ ಕಾಯ್ದೆಯ ಸೆಕ್ಷನ್ 126ಎ ಅನ್ನು ಉಲ್ಲೇಖಿಸಿ ಸಲಹೆ ಸೂಚನೆಗಳನ್ನು ನೀಡಿತ್ತು.

ಬಿಹಾರ ಚುನಾವಣೆಯು ಮೂರು ಹಂತಗಳಲ್ಲಿ ನಡೆಯಲಿದೆ. ಅ. 28ರಂದು ಮೊದಲ ಹಂತ, ನ.3 ರಂದು ಎರಡನೇ ಹಂತ, ನ.7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ನ. 10ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT