ಸಾಂದರ್ಭಿಕ ಚಿತ್ರ 
ದೇಶ

ಟಿಆರ್ ಪಿ ಹಗರಣ: ಸುದ್ದಿ ವಾಹಿನಿಗಳ ವಾರದ ರೇಟಿಂಗ್ಸ್ ತಾತ್ಕಾಲಿಕ ಸ್ಥಗಿತ- ಬಿಎಆರ್ ಸಿ

ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್ ಪಿ) ಹಗರಣ ಹಿನ್ನೆಲೆಯಲ್ಲಿ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ(ಬಿಎಆರ್ ಸಿ) ದೇಶಾದ್ಯಂತ ಸುದ್ದಿ ವಾಹಿನಿಗಳ ವಾರದ ರೇಟಿಂಗ್ಸ್ ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್ ಪಿ) ಹಗರಣ ಹಿನ್ನೆಲೆಯಲ್ಲಿ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (ಬಿಎಆರ್ ಸಿ) ದೇಶಾದ್ಯಂತ ಸುದ್ದಿ ವಾಹಿನಿಗಳ ವಾರದ ರೇಟಿಂಗ್ಸ್ ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಸುದ್ದಿವಾಹಿನಿಗಳ ರೇಟಿಂಗ್ ಗಳ ಸಂಖ್ಯಾಶಾಸ್ತ್ರೀಯ ದೃಢತೆ, ಪಾರದರ್ಶಕತೆಯನ್ನು ಸುಧಾರಿಸಲು ಪ್ರಸ್ತುತ ಅಳತೆಯ ಮಾನದಂಡಗಳನ್ನು ಪರಿಶೀಲಿಸಲು ಇನ್ನು 12 ವಾರಗಳವರೆಗೆ ಸಾಪ್ತಾಹಿಕ ರೇಟಿಂಗ್‌ ಗೆ ವಿರಾಮ ನೀಡುವುದಾಗಿ ರೇಟಿಂಗ್ಸ್ ಮಂಡಳಿ ತಿಳಿಸಿದೆ.

ಈ ತಿಂಗಳ ಆರಂಭದಲ್ಲಿ ಟಿಆರ್ ಪಿ ಹಗರಣ ಬೆಳಕಿಗೆ ಬಂದ ನಂತರ 5 ಮಂದಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತರಾದವರಲ್ಲಿ ಸುದ್ದಿ ವಾಹಿನಿಗಳ ಉದ್ಯೋಗಿಗಳು ಸೇರಿದ್ದಾರೆ. ಪೊಲೀಸರು ಅರ್ನಬ್ ಗೋಸ್ವಾಮಿಯವರ ರಿಪಬ್ಲಿಕ್ ಟಿವಿ ಎಕ್ಸಿಕ್ಯೂಟಿವ್ ಗಳನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ. ತಮ್ಮ ಕಡೆಯಿಂದ ಯಾವುದೇ ಅಕ್ರಮ ನಡೆದಿಲ್ಲ ಎಂದು ರಿಪಬ್ಲಿಕ್ ಟಿವಿ ತಿಳಿಸಿದೆ.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT