ಕೋವಿಡ್-19 
ದೇಶ

ಕೋವಿಡ್-19: ಕರ್ನಾಟಕ, ಕೇರಳ, ರಾಜಸ್ಥಾನ, ಛತ್ತೀಸ್ ಗಢ, ಪ.ಬಂಗಾಳಕ್ಕೆ ಕೇಂದ್ರ ತಂಡ ನಿಯೋಜನೆ

ಕೋವಿಡ್ -19 ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಕರ್ನಾಟಕ, ಕೇರಳ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ನಿಯೋಜಿಸಿದೆ.

ನವದೆಹಲಿ: ಕೋವಿಡ್ -19 ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಕರ್ನಾಟಕ, ಕೇರಳ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ನಿಯೋಜಿಸಿದೆ.

ಕಂಟೈನ್ ಮೆಂಟ್ ಜೋನ್, ಕಣ್ಗಾವಲು, ಪರೀಕ್ಷೆ, ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳು ಮತ್ತು ಪಾಸಿಟಿವ್ ಪ್ರಕರಣಗಳ ಸಮರ್ಥ ವೈದ್ಯಕೀಯ ನಿರ್ವಹಣೆಗೆ ಕೇಂದ್ರ ತಂಡ ರಾಜ್ಯಗಳಿಗೆ ನೆರವು ನೀಡಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

"ಕೊರೋನಾಗೆ ಸಮಯೋಚಿತ ಚಿಕಿತ್ಸೆ ಮತ್ತು ಇತರೆ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ರಾಜ್ಯಗಳಿಗೆ ಕೇಂದ್ರ ತಂಡಗಳು ಮಾರ್ಗದರ್ಶನ ನೀಡುತ್ತವೆ" ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರತಿ ತಂಡವು ಜಂಟಿ ಕಾರ್ಯದರ್ಶಿ(ಆಯಾ ರಾಜ್ಯದ ನೋಡಲ್ ಅಧಿಕಾರಿ), ಸಾರ್ವಜನಿಕ ಆರೋಗ್ಯ ಅಂಶಗಳನ್ನು ನೋಡಿಕೊಳ್ಳಲು ಒಬ್ಬ ಸಾರ್ವಜನಿಕ ಆರೋಗ್ಯ ತಜ್ಞರು, ಸೋಂಕು ತಡೆಗಟ್ಟುವ ಸಂಬಂಧ ಒಬ್ಬ ವೈದ್ಯ ಮತ್ತು ರಾಜ್ಯವು ಅನುಸರಿಸುತ್ತಿರುವ ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್ ಅನ್ನು ಒಳಗೊಂಡಿರುತ್ತದೆ.

ಕರ್ನಾಟಕದಲ್ಲಿ ಇದುವರೆಗೆ 7,43,848 ಪ್ರಕರಣಗಳ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದು ಪ್ರತಿ ಮಿಲಿಯನ್ ಜನಸಂಖ್ಯೆಗೆ 11,010 ಪ್ರಕರಣಗಳನ್ನು ಹೊಂದಿದೆ. ಅಲ್ಲದೆ, ರಾಜ್ಯದಲ್ಲಿ 6,20,008 ಕೊರೋನಾ ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT