ಹತ್ರಾಸ್ ಪ್ರಕರಣ ಖಂಡಿಸಿ ಪ್ರತಿಭಟನೆಯ ಚಿತ್ರ 
ದೇಶ

ಹತ್ರಾಸ್ ಗ್ಯಾಂಗ್ ರೇಪ್: ಜನಾಂಗೀಯ, ಕೋಮು ಗಲಭೆ ಸೃಷ್ಟಿಸುವ ಸಂಚು ಆಗಿದೆಯೇ? ಎಸ್ ಟಿಎಫ್ ತನಿಖೆ

ಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ  ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

ಲಖನೌ:  ಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ? ಎಂಬುದರ  ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು  ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

ಹತ್ರಾಸ್ ನಲ್ಲಿನ ಚಂದ್ಪಾ ಠಾಣೆಯಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಯೋಗಿ ಆದಿತ್ಯನಾಥ್ ಸರ್ಕಾರವನ್ನು ಅಪಖ್ಯಾತಿಗೊಳಿಸುವ ಅಂತಾರಾಷ್ಟ್ರೀಯ ಪ್ರಯತ್ನಗಳು ಬೆಳಕಿಗೆ ಬಂದ ನಂತರ ಪಿತೂರಿಗಳನ್ನು ಬಹಿರಂಗಪಡಿಸಲು ಎಸ್‌ಟಿಎಫ್‌ನ ವಿಶೇಷ ಘಟಕವನ್ನು ಸ್ಥಾಪಿಸಲಾಗಿದೆ ಎಂದು ರಾಜ್ಯವು ತಿಳಿಸಿದೆ.

ಯೋಗಿ ಸರ್ಕಾರದ ಹೆಸರು ಕೆಡಿಸಲು ಪಾಕಿಸ್ತಾನ, ಯುಇಎ ಮತ್ತು ಬಾಂಗ್ಲಾದೇಶ ಸೇರಿದಂತೆ ಎಲ್ಲಾ ಇಸ್ಲಾಮಿಕ್ ರಾಷ್ಟ್ರಗಳಿಂದ ದೊಡ್ಡ ಮಟ್ಟದ ನಿಧಿ ಮತ್ತು ಸಂಚುಗಳನ್ನು ರೂಪಿಸಲಾಗುತ್ತಿದೆ.  ಎಡಿಟ್ ಮಾಡಿರುವ ಛಾಯಾಚಿತ್ರಗಳು, ನಕಲಿ ಮಾಹಿತಿ ಹರಡುವುದರೊಂದಿಗೆ ಜನಾಂಗೀಯ ಮತ್ತು ಕೋಮು ಗಲಭೆ ಸೃಷ್ಟಿಸಲು ಸಂಚು ರೂಪಿಸುವ ಪ್ರಯತ್ನಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂದು ಅದರಲ್ಲಿ ಹೇಳಲಾಗಿದೆ.

ಮುಖ್ಯಮಂತ್ರಿ ಕಾರ್ಯಾಲಯದ ಪ್ರಕಾರ, ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ  ಪಿಎಫ್ಐ ನ ಸದಸ್ಯರನ್ನು ವಿಚಾರಣೆಗೊಳಪಡಿಸಿ ಬಂಧಿಸಲಾಗಿದೆ.ಮಥುರಾದಲ್ಲಿ ಪಿಎಫ್ ಐ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ವರು ಜನರ ವಿರುದ್ಧ ಆಕ್ಟೋಬರ್ 7 ರಂದು ಎಫ್ ಐಆರ್ ಒಂದನ್ನು ದಾಖಲಿಸಲಾಗಿದೆ.

ಈ ಮಧ್ಯೆ, ಪ್ರಕರಣವನ್ನು ದೆಹಲಿಗೆ ವರ್ಗಾಯಿಸಬೇಕೆಂದು ಸಂತ್ರಸ್ತೆಯ ಕುಟುಂಬ ಒತ್ತಾಯಿಸಿದೆ. ನಾವು ಎಲ್ಲಿದ್ದರೂ ಸುರಕ್ಷಿತವಾಗಿರಲು ಬಯಸುತ್ತೇವೆ ಎಂದಿರುವ ಸಂತ್ರಸ್ಥೆಯ ಸಹೋದರ, ನಾವು ಕೂಡಾ ದೆಹಲಿಗೆ ಹೋಗಲು ಬಯಸಿದ್ದು, ಸರ್ಕಾರ ನೆರವು ನೀಡಬೇಕೆಂದು ಮನವಿ ಮಾಡಿದ್ದಾರೆ.

ಹತ್ರಾಸ್ ಘಟನೆ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸುತ್ತಿದ್ದಂತೆ ಈ ಬೆಳವಣಿಗೆ ನಡೆದಿದೆ. ಸಂತ್ರಸ್ತೆಯ ಅಂತ್ಯಸಂಸ್ಕಾರ ನಡೆದ ಸ್ಥಳದ ಮಾದರಿಯನ್ನು ತನಿಖಾ ತಂಡ ಮಂಗಳವಾರ ಸಂಗ್ರಹಿಸಿದ್ದು, ಪ್ರಕರಣದ ಬಗ್ಗೆ ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT