ವಿದೇಶಾಂಗ ಸಚಿವ ಎಸ್ ಜೈಶಂಕರ್ 
ದೇಶ

ಭಾರತ-ಚೀನಾ ಗೌಪ್ಯ ಮಾತುಕತೆಯಲ್ಲಿ ನಿರತ? ವಿದೇಶಾಂಗ ಸಚಿವ ಜೈಶಂಕರ್ ಏನಂತಾರೆ?

ಪೂರ್ವ ಲಡಾಕ್ ನಲ್ಲಿ ಎರಡು ದೇಶಗಳ ಸೇನೆ ನಿಯೋಜನೆಯಿಂದ ಉಂಟಾಗಿರುವ ಸಮಸ್ಯೆ, ಆತಂಕದ ವಾತಾವರಣವನ್ನು ನಿವಾರಿಸಲು ಗೌಪ್ಯ ಮಾತುಕತೆಯಲ್ಲಿ ನಿರತವಾಗಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ನವದೆಹಲಿ: ಪೂರ್ವ ಲಡಾಕ್ ನಲ್ಲಿ ಎರಡು ದೇಶಗಳ ಸೇನೆ ನಿಯೋಜನೆಯಿಂದ ಉಂಟಾಗಿರುವ ಸಮಸ್ಯೆ, ಆತಂಕದ ವಾತಾವರಣವನ್ನು ನಿವಾರಿಸಲು ಗೌಪ್ಯ ಮಾತುಕತೆಯಲ್ಲಿ ನಿರತವಾಗಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ಮಾತುಕತೆ ಮುಂದುವರಿದಿದೆ. ಸೇನೆ ಹಿಂಪಡೆಯುವ ಕೆಲಸ ಪ್ರಗತಿಯಲ್ಲಿದೆ. ಈಗ ನಡೆಯುತ್ತಿರುವ ಮಾತುಕತೆ, ಬೆಳವಣಿಗೆಗಳು ಗೌಪ್ಯವಾಗಿದೆ. ಇದನ್ನು ಸಾರ್ವಜನಿಕವಾಗಿ ಈಗ ನಾನು ಹೇಳುವ ಸ್ಥಿತಿಯಲ್ಲಿಲ್ಲ. ಈ ಬಗ್ಗೆ ಮೊದಲೇ ತೀರ್ಮಾನ ತೆಗೆದುಕೊಳ್ಳಲು ನಾನು ಸಿದ್ದವಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ.

ಅವರು ನಿನ್ನೆ ದೆಹಲಿಯಲ್ಲಿ ಬ್ಲೂಮ್ ಬರ್ಗ್ ಇಂಡಿಯಾ ಎಕನಾಮಿಕ್ ವೇದಿಕೆಯನ್ನುದ್ದೇಶಿಸಿ ಮಾತನಾಡಿ, ಗಡಿ ವಾಸ್ತವ ರೇಖೆಯಲ್ಲಿ ಸೇನೆಯನ್ನು ನಿಯೋಜಿಸುವ ಕೆಲಸ ಖಂಡಿತಾ ಮುಂದುವರಿದಿದೆ.ಇಲ್ಲಿ ಎರಡೂ ದೇಶಗಳು ಸಮಾನತೆಯನ್ನು ಕಂಡುಕೊಳ್ಳಬಹುದೇ, ಗಡಿಯಲ್ಲಿ ನಮ್ಮ ಮುಂದಿರುವ ಸವಾಲು ಅದೇ ಆಗಿದೆ ಎಂದರು.

ಗಡಿಭಾಗದಲ್ಲಿ ಶಾಂತಿ ನೆಲೆಸಲು 1993ರಲ್ಲಿ ಮಾಡಿಕೊಂಡ ಒಪ್ಪಂದ ನಂತರ ಎರಡೂ ದೇಶಗಳ ಮಧ್ಯೆ ಸಾಕಷ್ಟು ಸಂಬಂಧ ಸುಧಾರಣೆಯಾಗಿದೆ. ಶಾಂತಿ ಮತ್ತು ಸೌಹಾರ್ದತೆ ಇಲ್ಲದಿದ್ದಾಗ ಮಾಡಿರುವ ಒಪ್ಪಂದವನ್ನು ಮುರಿದಾಗ ಅಲ್ಲಿ ಸಮಸ್ಯೆಯುಂಟಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT