ವಿದೇಶಾಂಗ ಸಚಿವ ಎಸ್ ಜೈಶಂಕರ್ 
ದೇಶ

ಭಾರತ-ಚೀನಾ ಗೌಪ್ಯ ಮಾತುಕತೆಯಲ್ಲಿ ನಿರತ? ವಿದೇಶಾಂಗ ಸಚಿವ ಜೈಶಂಕರ್ ಏನಂತಾರೆ?

ಪೂರ್ವ ಲಡಾಕ್ ನಲ್ಲಿ ಎರಡು ದೇಶಗಳ ಸೇನೆ ನಿಯೋಜನೆಯಿಂದ ಉಂಟಾಗಿರುವ ಸಮಸ್ಯೆ, ಆತಂಕದ ವಾತಾವರಣವನ್ನು ನಿವಾರಿಸಲು ಗೌಪ್ಯ ಮಾತುಕತೆಯಲ್ಲಿ ನಿರತವಾಗಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ನವದೆಹಲಿ: ಪೂರ್ವ ಲಡಾಕ್ ನಲ್ಲಿ ಎರಡು ದೇಶಗಳ ಸೇನೆ ನಿಯೋಜನೆಯಿಂದ ಉಂಟಾಗಿರುವ ಸಮಸ್ಯೆ, ಆತಂಕದ ವಾತಾವರಣವನ್ನು ನಿವಾರಿಸಲು ಗೌಪ್ಯ ಮಾತುಕತೆಯಲ್ಲಿ ನಿರತವಾಗಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.

ಮಾತುಕತೆ ಮುಂದುವರಿದಿದೆ. ಸೇನೆ ಹಿಂಪಡೆಯುವ ಕೆಲಸ ಪ್ರಗತಿಯಲ್ಲಿದೆ. ಈಗ ನಡೆಯುತ್ತಿರುವ ಮಾತುಕತೆ, ಬೆಳವಣಿಗೆಗಳು ಗೌಪ್ಯವಾಗಿದೆ. ಇದನ್ನು ಸಾರ್ವಜನಿಕವಾಗಿ ಈಗ ನಾನು ಹೇಳುವ ಸ್ಥಿತಿಯಲ್ಲಿಲ್ಲ. ಈ ಬಗ್ಗೆ ಮೊದಲೇ ತೀರ್ಮಾನ ತೆಗೆದುಕೊಳ್ಳಲು ನಾನು ಸಿದ್ದವಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ.

ಅವರು ನಿನ್ನೆ ದೆಹಲಿಯಲ್ಲಿ ಬ್ಲೂಮ್ ಬರ್ಗ್ ಇಂಡಿಯಾ ಎಕನಾಮಿಕ್ ವೇದಿಕೆಯನ್ನುದ್ದೇಶಿಸಿ ಮಾತನಾಡಿ, ಗಡಿ ವಾಸ್ತವ ರೇಖೆಯಲ್ಲಿ ಸೇನೆಯನ್ನು ನಿಯೋಜಿಸುವ ಕೆಲಸ ಖಂಡಿತಾ ಮುಂದುವರಿದಿದೆ.ಇಲ್ಲಿ ಎರಡೂ ದೇಶಗಳು ಸಮಾನತೆಯನ್ನು ಕಂಡುಕೊಳ್ಳಬಹುದೇ, ಗಡಿಯಲ್ಲಿ ನಮ್ಮ ಮುಂದಿರುವ ಸವಾಲು ಅದೇ ಆಗಿದೆ ಎಂದರು.

ಗಡಿಭಾಗದಲ್ಲಿ ಶಾಂತಿ ನೆಲೆಸಲು 1993ರಲ್ಲಿ ಮಾಡಿಕೊಂಡ ಒಪ್ಪಂದ ನಂತರ ಎರಡೂ ದೇಶಗಳ ಮಧ್ಯೆ ಸಾಕಷ್ಟು ಸಂಬಂಧ ಸುಧಾರಣೆಯಾಗಿದೆ. ಶಾಂತಿ ಮತ್ತು ಸೌಹಾರ್ದತೆ ಇಲ್ಲದಿದ್ದಾಗ ಮಾಡಿರುವ ಒಪ್ಪಂದವನ್ನು ಮುರಿದಾಗ ಅಲ್ಲಿ ಸಮಸ್ಯೆಯುಂಟಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!