ಭಾರತೀಯ ಸೇನೆ ದುರಸ್ತಿ ಮಾಡಿರುವ ಪಾಕ್ ಅಧಿಕಾರಿಯ ಸಮಾಧಿ 
ದೇಶ

ಶೌರ್ಯ ಪ್ರಶಸ್ತಿ ಪಡೆದಿದ್ದ ಪಾಕ್ ಸೇನಾಧಿಕಾರಿ ಸಮಾಧಿಯನ್ನು ದುರಸ್ತಿ ಮಾಡಿದ ಭಾರತೀಯ ಸೇನೆ

ವಿಶ್ವದ ಅತ್ಯಂತ ವೃತ್ತಿಪರ ಹಾಗೂ ನೈತಿಕತೆ ಹೊಂದಿದ ಸೇನೆಗಳಲ್ಲಿ ಭಾರತೀಯ ಸೇನೆ ಕೂಡ ಒಂದು ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ. ಹಾನಿಗೊಳಗಾಗಿದ್ದ ಪಾಕಿಸ್ತಾನ ಅಧಿಕಾರಿಯೊಬ್ಬರ ಸಮಾಧಿಯನ್ನು ಪುನಃ ಸ್ಥಾಪಿಸುವ ಮೂಲಕ ಗೌರವ ಸಲ್ಲಿಸಿದೆ.

ಶ್ರೀನಗರ: ವಿಶ್ವದ ಅತ್ಯಂತ ವೃತ್ತಿಪರ ಹಾಗೂ ನೈತಿಕತೆ ಹೊಂದಿದ ಸೇನೆಗಳಲ್ಲಿ ಭಾರತೀಯ ಸೇನೆ ಕೂಡ ಒಂದು ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ. ಹಾನಿಗೊಳಗಾಗಿದ್ದ ಪಾಕಿಸ್ತಾನ ಅಧಿಕಾರಿಯೊಬ್ಬರ ಸಮಾಧಿಯನ್ನು ಪುನಃ ಸ್ಥಾಪಿಸುವ ಮೂಲಕ ಗೌರವ ಸಲ್ಲಿಸಿದೆ. ಈ ಮೂಲಕ ಸೈನಿಕನೇ ಮೊದಲು ಉಳಿದದ್ದೆಲ್ಲ ನಂತರ ಎಂಬ ಧ್ಯೇಯ ವಾಕ್ಯದ ಬದ್ಧತೆಯನ್ನು ಭಾರತೀಯ ಸೇನೆ ಪ್ರದರ್ಶಿಸಿದೆ. 

ಭಾರತದ ಸೇನೆ ಮತ್ತು ಚಿನಾರ್ ಕಾರ್ಪ್ಸ್ ಸಂಪ್ರದಾಯದಂತೆ ನೌಗಂನ ಗಡಿ ನಿಯಂತ್ರಣ ರೇಖೆಯಲ್ಲಿ 1972 ಮೇ 05 ರಂದು ಮೃತಪಟ್ಟ ಪಾಕಿಸ್ತಾನ ಸೇನೆಯ ಸಿತಾರಾ ಇ ಜುರಾತ್ ಮೊಹಮ್ಮದ್ ಶಬೀರ್ ಖಾನ್ ಅವರ ಸಮಾಧಿ ದುರಸ್ತಿ ಮಾಡಲಾಗಿದೆ ಎಂದು ಚಿನಾರ್ ಕಾರ್ಪ್ಸ್ ಟ್ವೀಟ್ ಮಾಡಿದೆ.

ಮೇಜರ್ ಮೊಹಮ್ಮದ್ ಶಬ್ಬಿರ್ ಖಾನ್ ನೆನಪಿನಾರ್ಥವಾಗಿ ಸಿತಾರ್-ಎ-ಜುರತ್ ಶಾಹಿದ್ 5 ಮೇ, 1972, 1630 ಎಚ್ ಅವರು ಇ ಸಿಖ್ಖರ ಪ್ರತಿ ದಾಳಿ ವೇಳೆ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದೆ. 

ಈ ಕುರಿತು ಹೇಳಿಕೆ ನೀಡಿರುವ ಭಾರತೀಯ ಸೇನೆ, ಭಾರತೀಯ ಸೇನೆ ನಂಬುವಂತೆ ಮೃತನಾದ ಯೋಧ ಯಾವುದೇ ದೇಶದವನಾದರೂ ಅದನ್ನೂ ಮೀರಿ ಎಲ್ಲ ಗೌರವಕ್ಕೆ ಅರ್ಹ. ಜಗತ್ತಿನಲ್ಲಿ ಭಾರತೀಯ ಸೇನೆಯ ರೀತಿ ಇದು ಎಂದು ತಿಳಿಸಿದೆ. 

ಶಬ್ಬಿರ್ ಖಾನ್ ಅವರು 1972ರಲ್ಲಿ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಭಾರತೀಯ ಸೈನಿಕರ ದಾಳಿಗೆ ತುತ್ತಾಗಿ, ಸಾವನ್ನಪ್ಪಿದ್ದರು. ಖಾನ್ ಪಾಕಿಸ್ತಾನದ ಮೂರನೇ ಅತ್ಯುನ್ನತ ಮಿಲಿಟರಿ ಪ್ರಶಸ್ತಿಯಾದ ಸೀತಾರಾ-ಎ-ಜುರಾತ್ ಪಡೆದವರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT