ಮದನ್ ಬಿ ಲೋಕೂರ್ 
ದೇಶ

ಕೃಷಿ ತ್ಯಾಜ್ಯಕ್ಕೆ ಬೆಂಕಿ ತಡೆಯುವ ಏಕಸದಸ್ಯ ಸಮಿತಿಗೆ ನಿವೃತ್ತ ನ್ಯಾ. ಮದನ್ ಬಿ ಲೋಕೂರ್ ನೇಮಕ

ದೆಹಲಿ– ರಾಷ್ಟ್ರ ರಾಜಧಾನಿ ಪ್ರದೇಶದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್‌, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ತಡೆಗಟ್ಟಲು ಮತ್ತು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಏಕ ಸದಸ್ಯ ಸಮಿತಿ ರಚಿಸಿದ್ದು,

ನವದೆಹಲಿ: ದೆಹಲಿ– ರಾಷ್ಟ್ರ ರಾಜಧಾನಿ ಪ್ರದೇಶದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್‌, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ತಡೆಗಟ್ಟಲು ಮತ್ತು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಏಕ ಸದಸ್ಯ ಸಮಿತಿ ರಚಿಸಿದ್ದು, ಅದಕ್ಕೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಅವರನ್ನು ನೇಮಕ ಮಾಡಿದೆ.

ದೆಹಲಿ ಮತ್ತು ಪರಿಸರ ಮಾಲಿನ್ಯ(ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಪ್ರಾಧಿಕಾರದ ಎಲ್ಲ ಅಧಿಕಾರಿಗಳು ನ್ಯಾಯಮೂರ್ತಿ ಲೋಕೂರ್ ಸಮಿತಿಗೆ ವರದಿ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಆದೇಶಿಸಿದೆ.

ಲೋಕೂರ್ ಸಮಿತಿಗೆ ಸಹಾಯ ಮಾಡಲು ಎನ್‌ಸಿಸಿ, ಎನ್‌ಎಸ್‌ಎಸ್‌ ಹಾಗೂ ಭಾರತ್ ಸ್ಕೌಟ್ಸ್‌ಗಳನ್ನು ನಿಯೋಜಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ರಾಜ್ಯಗಳ ಯಾವ್ಯಾವ ಭಾಗಗಳಲ್ಲಿ ಕೃಷಿ ತ್ಯಾಜ್ಯ ಸುಡಲಾಗುತ್ತದೆ ಎಂಬ ಮಾಹಿತಿ ಸೇರಿದಂತೆ ವಿವಿಧ ಹಂತಗಳಲ್ಲಿ ಲೋಕೂರ್ ಸಮಿತಿಗೆ ನೆರವಾಗಬೇಕು ಎಂದು ಸುಪ್ರೀಂಕೋರ್ಟ್‌ ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ (ಇಪಿಸಿಎ), ಹರಿಯಾಣ, ಪಂಜಾಬ್‌, ಉತ್ತರ ಪ್ರದೇಶ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ.

ಲೋಕೂರ್ ನೇತೃತ್ವದ ಸಮಿತಿ ಹದಿನೈದು ದಿನಗಳ ಕಾಲ ಅಧ್ಯಯನ ನಡೆಸಿ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಲಿದೆ ಎಂದು ಪೀಠ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!