ದೇಶ

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ವ್ಯಾನ್-ಬಸ್ ಡಿಕ್ಕಿ, 9 ಸಾವು, 30 ಮಂದಿಗೆ ಗಾಯ

Manjula VN

ಪಿಲಿಭಿತ್: ಉತ್ತರ ಪ್ರದೇಶದ ಪುರಾನ್ಪುರ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವ್ಯಾನ್ ಹಾಗೂ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ಲಖನೌನಿಂದ ಪಿಲಿಭಿತ್'ಗೆ ಬಸ್ ಬರುತ್ತಿತ್ತು. ಪುರಾನ್ಪುರ್ ಗಡಿ ಪ್ರದೇಶದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಇದ್ದಕ್ಕಿದ್ದಂತೆಯ ಉರುಳಿಬಿದ್ದಿದ್ದು, ಪರಿಣಾಮ ಸ್ಥಳದಲ್ಲಿಯೇ 9 ಮಂದಿ ದುರ್ಮರಣವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ರೂ ಪರಿಹಾರ ಘೋಷಣೆ
ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬ ಕುರಿತು ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

SCROLL FOR NEXT