ದೇಶ

ಪದ್ಮಭೂಷಣ ಪ್ರಶಸ್ತಿ ವಿಜೇತ ಕರ್ನಾಟಕ ಸಂಗೀತ ದಿಗ್ಗಜ ಪಿ.ಎಸ್. ನಾರಾಯಣಸ್ವಾಮಿ ಇನ್ನಿಲ್ಲ

Raghavendra Adiga

ಚೆನ್ನೈ: ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ, ಪದ್ಮಭೂಷಣ ವಿದ್ವಾನ್ ಪುಲಿಯೂರ್ ಸುಬ್ರಮಣ್ಯಂ ನಾರಾಯಣಸ್ವಾಮಿ(86) ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.

ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು. ತಮ್ಮದೇ ಆದ ಶೈಲಿಯ ‘ಮನೋಧರ್ಮ ಸಂಗೀತ’ವನ್ನು ವಿಕಸನಗೊಳಿಸಿದ ಕೀರ್ತಿ ಇವರದಾಗಿದೆ.

ಸಂಗೀತಗಾರ ಪಿ.ಎಸ್. ನಾರಾಯಣಸ್ವಾಮಿ ಅವರು ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು.

ಮೃತರಿಗೆ ಪತ್ನಿ, ಮೂವರು ಪುತ್ರಿಯರು ಮತ್ತು ಅಸಂಖ್ಯಾತ ಶಿಷ್ಯರು ಇದ್ದಾರೆ.

SCROLL FOR NEXT