ಪ್ರಧಾನಿ ನರೇಂದ್ರ ಮೋದಿ 
ದೇಶ

ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ಸುಲಭ ಮತ್ತು ತ್ವರಿತವಾಗಿ ಸಿಗುವಂತಾಗಬೇಕು: ಪ್ರಧಾನಿ

ದೇಶದ ಪ್ರತಿ ನಾಗರಿಕನಿಗೂ ಕೋವಿಡ್ -19 ಲಸಿಕೆ ತ್ವರಿತವಾಗಿ ಮತ್ತು ಅತ್ಯಂತ ಸುಲಭವಾಗಿ ಸಿಗುವಂತಾಗಬೇಕು. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನವದೆಹಲಿ: ದೇಶದ ಪ್ರತಿ ನಾಗರಿಕನಿಗೂ ಕೋವಿಡ್ -19 ಲಸಿಕೆ ತ್ವರಿತವಾಗಿ ಮತ್ತು ಅತ್ಯಂತ ಸುಲಭವಾಗಿ ಸಿಗುವಂತಾಗಬೇಕು. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿ, ಲಸಿಕೆ ವಿತರಣೆ ಹಾಗೂ ಆಡಳಿತ ನಿರ್ವಹಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಭೆ ನಡೆಸಿದರು.

ಚುನಾವಣೆ ಮತ್ತು ವಿಪತ್ತು ನಿರ್ವಹಣೆ ಮಾಡುವ ರೀತಿಯಲ್ಲೇ ಎಲ್ಲಾ ಹಂತದ ಸರ್ಕಾರಿ ಮತ್ತು ನಾಗರಿಕರನ್ನು ಒಳಗೊಂಡ ಲಸಿಕೆ ವಿತರಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಂತೆ ಅಧಿಕಾರಿಗಳಿಗೆ ಪ್ರಧಾನಿ ಸೂಚಿಸಿದ್ದಾರೆ.

ದೈನಂದಿನ ಕೋವಿಡ್ ಪ್ರಕರಣಗಳ ಕುಸಿತ ಮತ್ತು ಚೇತರಿಕೆ ಪ್ರಮಾಣ ಹೆಚ್ಚಳವನ್ನು ಗಮನಿಸಿದ ಪ್ರಧಾನಿ, ಸಾಂಕ್ರಾಮಿಕ ರೋಗನ್ನು ತಡೆಗಟ್ಟುವ ಪ್ರಯತ್ನಗಳನ್ನು ಮುಂದುವರಿಸಬೇಕೆಂದು ಕರೆ ನೀಡಿದರು.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಮನದಲ್ಲಿಟ್ಟುಕೊಂಡು, ಆಯಾ ರಾಜ್ಯಗಳಿಗೆ ಲಸಿಕೆ ವಿತರಣೆಯಾಗಬೇಕು. ಲಾಜಿಸ್ಟಿಕ್, ವಿತರಣೆ, ಆಡಳಿತ ಸೇರಿದಂತೆ ಪ್ರತಿಯೊಂದ ಹಂತದಲ್ಲಿ ಯಾವುದೇ ಲೋಪವಾಗದಂತೆ ಕಟ್ಟು ನಿಟ್ಟಿನ ಕ್ರಮ ಜಾರಿಗೆ ತರಬೇಕು ಎಂದು ಪ್ರಧಾನಿ ಹೇಳಿದರು.

ಕೋಲ್ಡ್ ಸ್ಟೋರೇಜ್ ಸುಧಾರಿತ ಯೋಜನೆ, ವಿತರಣಾ ಜಾಲ, ಮೇಲ್ವಿಚಾರಣಾ ಕಾರ್ಯವಿಧಾನ, ಮುಂಗಡ ಮೌಲ್ಯಮಾಪನ ಮತ್ತು ಅಗತ್ಯವಿರುವ ಪೂರಕ ಸಾಧನಗಳಾದ ವೈಲ್ಸ್, ಸಿರಿಂಜ್ ಇತ್ಯಾದಿಗಳನ್ನು ತಯಾರಿಸುವ ಹಾಗೂ ವಿತರಿಸುವ ಜಾಲ ಸಮರ್ಪಕವಾಗಿರಬೇಕು ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ