ಸಾಂದರ್ಭಿಕ ಚಿತ್ರ 
ದೇಶ

ಚಳಿಗಾಲದಲ್ಲಿ ಕೋವಿಡ್-19 ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ: ವಿಕೆ ಪೌಲ್

ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ಹೆಚ್ಚಿನ ರಾಜ್ಯಗಳಲ್ಲಿ ಸ್ಥಿರವಾಗಿರುವುದರಿಂದ ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿರುವ ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್, ಚಳಿಗಾಲದಲ್ಲಿ ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿ ಹಾಕಿಲ್ಲ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ಹೆಚ್ಚಿನ ರಾಜ್ಯಗಳಲ್ಲಿ ಸ್ಥಿರವಾಗಿರುವುದರಿಂದ ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿರುವ ನೀತಿ ಆಯೋಗದ ಸದಸ್ಯ ವಿ. ಕೆ. ಪೌಲ್,  ಚಳಿಗಾಲದಲ್ಲಿ ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿ ಹಾಕಿಲ್ಲ.

ದೇಶದಲ್ಲಿ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ತಜ್ಞರ ಸಮನ್ವಯದ ಮುಖ್ಯಸ್ಥರೂ ಆಗಿರುವ ಪೌಲ್, ಒಮ್ಮೆ ಕೋವಿಡ್-19 ಲಸಿಕೆ ಲಭ್ಯವಾದರೆ, ಅದನ್ನು ನಾಗರಿಕರಿಗೆ ತಲುಪಿಸಲು ಸಾಕಷ್ಟು ಸಂಪನ್ಮೂಲಗಳಿವೆ ಎಂದು ಹೇಳಿದರು.
 
ದೇಶದಲ್ಲಿ ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವಿನ ಪ್ರಕರಣಗಳ ಸಂಖ್ಯೆ ಕುಸಿದಿದೆ.ಆದರೂ, ಕೇರಳ, ಕರ್ನಾಟಕ, ರಾಜಸ್ಥಾನ, ಛತ್ತೀಸ್ ಗಢ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮತ್ತು ಮೂರ್ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಲೂ ಸಹ ಸೋಂಕು ಹೆಚ್ಚಾಗುತ್ತಿದೆ ಎಂದು ಪೌಲ್  ತಿಳಿಸಿದರು.

ಪೌಲ್ ಪ್ರಕಾರ, ದೇಶ ಈಗ ಸ್ವಲ್ಪ ಉತ್ತಮ ಸ್ಥಿತಿಯಲ್ಲಿದೆ ಆದರೆ, ದೇಶವು ಇನ್ನೂ ಬಹಳ ದೂರ ಸಾಗಬೇಕಿದೆ ಏಕೆಂದರೆ ಶೇ. 90 ರಷ್ಟು ಜನರು ಇನ್ನೂ ಕೊರೋನಾವೈರಸ್  ಸೋಂಕಿಗೆ ಒಳಗಾಗಿದ್ದಾರೆ.

ಚಳಿಗಾಲದ ಆರಂಭದೊಂದಿಗೆ ಎರಡನೇ ಅಲೆಯನ್ನು ನೋಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಪೌಲ್,  ಯುರೋಪಿನ ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಕಂಡುಬರುತ್ತಿರುವುದನ್ನು ನೋಡುತ್ತಿದ್ದೇವೆ.ದೇಶದಲ್ಲಿ ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.ಈ ಸೋಂಕಿನ ಬಗ್ಗೆ ಇನ್ನೂ ತಿಳಿಯುತ್ತಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT