ಪಿ ಚಿದಂಬರಂ 
ದೇಶ

ವಿಭಜನೆಯ ವಿರುದ್ಧ ಏಕತೆಯ ಆಯ್ಕೆ: ಬಿಡನ್ ಹೇಳಿಕೆ ಉಲ್ಲೇಖಿಸಿ ಬಿಹಾರ ಮತದಾರರಿಗೆ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಚಿದಂಬರಂ ಕರೆ

ಯುಎಸ್ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಅವರ ಹೇಳಿಕೆ ಉಲ್ಲೇಖಿಸಿ "ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ" ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಭಾರತದಲ್ಲಿಯೂ ಬಿಹಾರ, ಮಧ್ಯಪ್ರದೇಶ ಮತ್ತು ಇತರೆಡೆಗಳಲ್ಲಿ ಮತ ಚಲಾಯಿಸುವ ಜನತೆ ಇದೇ ರೀತಿಯ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ನವದೆಹಲಿ: ಯುಎಸ್ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಅವರ ಹೇಳಿಕೆ ಉಲ್ಲೇಖಿಸಿ "ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ" ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಭಾರತದಲ್ಲಿಯೂ ಬಿಹಾರ, ಮಧ್ಯಪ್ರದೇಶ ಮತ್ತು ಇತರೆಡೆಗಳಲ್ಲಿ ಮತ ಚಲಾಯಿಸುವ ಜನತೆ ಇದೇ ರೀತಿಯ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಅಕ್ಟೋಬರ್ 28 ರಿಂದ ಮೂರು ಹಂತಗಳಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಲ್ಲದೆ ಒಂದು ಲೋಕಸಭೆ ಉಪಚುನಾವಣೆ ಮತ್ತು 12 ರಾಜ್ಯಗಳಲ್ಲಿ56 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ.

"ಯುಎಸ್ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿಜೋ ಬಿಡೆನ್ ನಿನ್ನೆ" ನಾವು ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆಯ, ಕಲ್ಪನೆಯ ವಿರುದ್ಧ ವಿಜ್ಞಾನ, ಸುಳ್ಳಿನ ವಿರುದ್ಧ ಸತ್ಯದ ಆಯ್ಕೆ ಮಾಡಬೇಕು" ಎಂದಿದ್ದಾರೆ.ಅದರಂತೆ ನಮ್ಮಲ್ಲಿಯೂ ಬಿಹಾರ, ಮಧ್ಯಪ್ರದೇಶ ಹಾಗೂ ಇತರೆಡೆಗಳಲ್ಲಿ ಈ ತಿಂಗಳು ನಡೆಯುವ ಚುನಾವಣೆ ವೇಳೆ ಮತದಾರರು  ತೆಗೆದುಕೊಳ್ಳಬೇಕಾದ ಒಳ್ಳೆಯ ಪ್ರತಿಜ್ಞೆ ಇದಾಗಿದೆ" ಚಿದಂಬರಂ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ನ್ಯೂಜಿಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಅರ್ಡೆರ್ನ್ ಅವರ ಗೆಲುವು ಸಭ್ಯತೆ ಮತ್ತು ಪ್ರಗತಿಪರ ಮೌಲ್ಯಗಳು ಪ್ರಜಾಪ್ರಭುತ್ವದಲ್ಲಿ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಭರವಸೆಯನ್ನು ನಮಗೆ ನೀಡುತ್ತದೆ. ಎಂದು ಕೇಂದ್ರದ ಮಾಜಿ ಸಚಿವರು ಹೇಳಿದರು. ನ್ಯೂಜಿಲ್ಯಾಂಡ್ ಮಹಾ ಚುನಾವಣೆಯಲ್ಲಿ  ಭರ್ಜರಿ ಜಯ ಸಾಧಿಸಿ ಅರ್ಡೆರ್ನ್ ಎರಡನೇ ಬಾರಿಗೆ ಪ್ರಧಾನಿ ಪಟ್ಟವೇರುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT