ಪಿ ಚಿದಂಬರಂ 
ದೇಶ

ವಿಭಜನೆಯ ವಿರುದ್ಧ ಏಕತೆಯ ಆಯ್ಕೆ: ಬಿಡನ್ ಹೇಳಿಕೆ ಉಲ್ಲೇಖಿಸಿ ಬಿಹಾರ ಮತದಾರರಿಗೆ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಚಿದಂಬರಂ ಕರೆ

ಯುಎಸ್ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಅವರ ಹೇಳಿಕೆ ಉಲ್ಲೇಖಿಸಿ "ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ" ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಭಾರತದಲ್ಲಿಯೂ ಬಿಹಾರ, ಮಧ್ಯಪ್ರದೇಶ ಮತ್ತು ಇತರೆಡೆಗಳಲ್ಲಿ ಮತ ಚಲಾಯಿಸುವ ಜನತೆ ಇದೇ ರೀತಿಯ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ನವದೆಹಲಿ: ಯುಎಸ್ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಅವರ ಹೇಳಿಕೆ ಉಲ್ಲೇಖಿಸಿ "ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ" ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಭಾರತದಲ್ಲಿಯೂ ಬಿಹಾರ, ಮಧ್ಯಪ್ರದೇಶ ಮತ್ತು ಇತರೆಡೆಗಳಲ್ಲಿ ಮತ ಚಲಾಯಿಸುವ ಜನತೆ ಇದೇ ರೀತಿಯ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಅಕ್ಟೋಬರ್ 28 ರಿಂದ ಮೂರು ಹಂತಗಳಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಲ್ಲದೆ ಒಂದು ಲೋಕಸಭೆ ಉಪಚುನಾವಣೆ ಮತ್ತು 12 ರಾಜ್ಯಗಳಲ್ಲಿ56 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ.

"ಯುಎಸ್ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿಜೋ ಬಿಡೆನ್ ನಿನ್ನೆ" ನಾವು ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆಯ, ಕಲ್ಪನೆಯ ವಿರುದ್ಧ ವಿಜ್ಞಾನ, ಸುಳ್ಳಿನ ವಿರುದ್ಧ ಸತ್ಯದ ಆಯ್ಕೆ ಮಾಡಬೇಕು" ಎಂದಿದ್ದಾರೆ.ಅದರಂತೆ ನಮ್ಮಲ್ಲಿಯೂ ಬಿಹಾರ, ಮಧ್ಯಪ್ರದೇಶ ಹಾಗೂ ಇತರೆಡೆಗಳಲ್ಲಿ ಈ ತಿಂಗಳು ನಡೆಯುವ ಚುನಾವಣೆ ವೇಳೆ ಮತದಾರರು  ತೆಗೆದುಕೊಳ್ಳಬೇಕಾದ ಒಳ್ಳೆಯ ಪ್ರತಿಜ್ಞೆ ಇದಾಗಿದೆ" ಚಿದಂಬರಂ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ನ್ಯೂಜಿಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಅರ್ಡೆರ್ನ್ ಅವರ ಗೆಲುವು ಸಭ್ಯತೆ ಮತ್ತು ಪ್ರಗತಿಪರ ಮೌಲ್ಯಗಳು ಪ್ರಜಾಪ್ರಭುತ್ವದಲ್ಲಿ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಭರವಸೆಯನ್ನು ನಮಗೆ ನೀಡುತ್ತದೆ. ಎಂದು ಕೇಂದ್ರದ ಮಾಜಿ ಸಚಿವರು ಹೇಳಿದರು. ನ್ಯೂಜಿಲ್ಯಾಂಡ್ ಮಹಾ ಚುನಾವಣೆಯಲ್ಲಿ  ಭರ್ಜರಿ ಜಯ ಸಾಧಿಸಿ ಅರ್ಡೆರ್ನ್ ಎರಡನೇ ಬಾರಿಗೆ ಪ್ರಧಾನಿ ಪಟ್ಟವೇರುತ್ತಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT