ಎಲ್ ಜೆಪಿ ನಾಯಕ ಚಿರಾಗ್ ಪಾಸ್ವಾನ್ ಮತ್ತು ಸಿಎಂ ನಿತೀಶ್ ಕುಮಾರ್(ಸಂಗ್ರಹ ಚಿತ್ರ) 
ದೇಶ

ಸಿಎಂ ನಿತೀಶ್ ರನ್ನು ತೃಪ್ತಿಪಡಿಸಲು ಪ್ರಧಾನಿ ನನ್ನ ವಿರುದ್ಧ ಮಾತನಾಡಲು ಮುಕ್ತವಾಗಿದ್ದಾರೆ: ಚಿರಾಗ್ ಪಾಸ್ವಾನ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತೃಪ್ತಿಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರುದ್ಧ ಏನು ಬೇಕಾದರೂ ಹೇಳಬಹುದು ಎಂದು ಲೋಕ ಜನಶಕ್ತಿ ಪಾರ್ಟಿ(ಎಲ್ ಜೆಪಿ)ಯ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತೃಪ್ತಿಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರುದ್ಧ ಏನು ಬೇಕಾದರೂ ಹೇಳಬಹುದು ಎಂದು ಲೋಕ ಜನಶಕ್ತಿ ಪಾರ್ಟಿ(ಎಲ್ ಜೆಪಿ)ಯ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ನನ್ನ ವಿರುದ್ಧ ಸುಖಾಸುಮ್ಮನೆ ಆರೋಪ ಕೇಳಲು ಜೊತೆಗೆ ಅನುಕಂಪ ಗಿಟ್ಟಿಸಿಕೊಳ್ಳಲು ನಾನು ಸಿದ್ದನಿಲ್ಲ, ಪ್ರಧಾನಿ ನರೇಂದ್ರ ಮೋದಿ ಈಗ ಧರ್ಮಸಂಕಟದಲ್ಲಿ ಸಿಲುಕಿದ್ದಾರೆ. ಮೈತ್ರಿಯಲ್ಲಿ ಅವರು ಮುಂದುವರಿದು ಅವರ ಕರ್ತವ್ಯವನ್ನು ನಿರ್ವಹಿಸಲಿ. ನಿತೀಶ್ ಕುಮಾರ್ ಅವರನ್ನು ತೃಪ್ತಿಪಡಿಸಲು ಪ್ರಧಾನಿ ನನ್ನ ವಿರುದ್ಧ ಏನು ಬೇಕಾದರೂ ಹೇಳಬಹುದು ಎಂದು ಚಿರಾಗ್ ಪಾಸ್ವಾನ್ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಆರೋಪ ಮಾಡಿದ ಪಾಸ್ವಾನ್, "ಸಿಎಂ ನಿತೀಶ್ ಕುಮಾರ್ ಅವರು ರಾಜ್ಯದ ಜನತೆಗೆ ಪೂರಕವಾದ ನೀತಿಗಳನ್ನು ಕಲ್ಪಿಸುವುದನ್ನು ಬಿಟ್ಟಿದ್ದಾರೆ. ಅವರು ಯುವಜನರ ವಿರೋಧಿಯಾಗಿದ್ದು, ಯುವಜನರು ಅನನುಭವಿಗಳು ಎಂದು ಹೇಳುತ್ತಾರೆ, ಆದರೆ ನಿತೀಶ್ ಕುಮಾರ್ ಅವರು ಜೆಪಿ ಚಳವಳಿಯನ್ನು ಆರಂಭಿಸಿದ್ದು ಯುವಕರಾಗಿದ್ದಾಗಲೇ, ನಮಗೆ ಅದು ಗೊತ್ತಿದೆ, ಬಿಹಾರಕ್ಕೆ ಏನು ಮಾಡಬೇಕೆಂದು ನಮಗೆ ಗೊತ್ತಿದೆ, ರಾಜ್ಯ ಈಗಾಗಲೇ ಅವರಿಗೆ 15 ವರ್ಷ ಆಳ್ವಿಕೆ ಮಾಡಲು ಬಿಟ್ಟಿದೆ ಎಂದರು.

ನಾನ್ಯಾಕೆ ಮೋದಿಯವರಿಗೆ ಗೌರವ ನೀಡುವುದಿಲ್ಲ, ನನ್ನ ತಂದೆ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿದ್ದಾಗ ಅವರು ಕರೆದು ನನಗೆ ಧೈರ್ಯ ತುಂಬಿದ್ದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಎಲ್ ಜೆಪಿ ಸ್ಪರ್ಧಿಸುವುದಿಲ್ಲ, ನಮ್ಮದೇನಿದ್ದರೂ ಜೆಡಿಯು ವಿರುದ್ಧದ ಹೋರಾಟವಷ್ಟೇ ಎಂದರು.

243 ಕ್ಷೇತ್ರಗಳನ್ನು ಹೊಂದಿರುವ ಬಿಹಾರ ವಿಧಾನಸಭೆಗೆ ಇದೇ ತಿಂಗಳ 28, ನವೆಂಬರ್ 3 ಮತ್ತು ನವೆಂಬರ್ 7ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT