ಸೋನಿಯಾ ಗಾಂಧಿ 
ದೇಶ

ಭಾರತೀಯ ಪ್ರಜಾಪ್ರಭುತ್ವ ಅತ್ಯಂತ ಸಂಕಷ್ಟ ಸ್ಥಿತಿಯಲ್ಲಿದೆ: ಸೋನಿಯಾ ಗಾಂಧಿ 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೂರು ಕೃಷಿ ಮಸೂದೆಗಳು ಹಾಗೂ ಕೋವಿಡ್-19 ನಿರ್ವಹಣೆ, ಆರ್ಥಿಕ ಹಿಂಜರಿತ, ದಲಿತರ ಮೇಲಿನ ದೌರ್ಜನ್ಯ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೂರು ಕೃಷಿ ಮಸೂದೆಗಳು ಹಾಗೂ ಕೋವಿಡ್-19 ನಿರ್ವಹಣೆ, ಆರ್ಥಿಕ ಹಿಂಜರಿತ, ದಲಿತರ ಮೇಲಿನ ದೌರ್ಜನ್ಯ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. 

ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿರುವ ಸೋನಿಯಾ ಗಾಂಧಿ ಭಾರತದ ಪ್ರಜಾಪ್ರಭುತ್ವ ತೀವ್ರ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದು, ಹಸಿರು ಕ್ರಾಂತಿಯ ಲಾಭವನ್ನು ಸೋಲಿಸುವುದಕ್ಕಾಗಿ ಪಿತೂರಿ ನಡೆಸಲಾಗಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ. 

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯಗಳ ಉಸ್ತುವಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿರುವ ಸೋನಿಯಾ ಗಾಂಧಿ,  ದೇಶದ ಜನತೆಯ ಹಕ್ಕುಗಳನ್ನು ವ್ಯವಸ್ಥಿತವಾಗಿ ಬಂಡವಾಳಶಾಹಿಗಳ ಕೈಲಿ ಇಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 

ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿರುವ ಸೋನಿಯಾ ಗಾಂಧಿ, ಕಾನೂನನ್ನು ಗೌರವಿಸಿ ಭಾರತೀಯ ಹೆಣ್ಣುಮಕ್ಕಳಿಗೆ ಹೆಚ್ಚಿನ ಭದ್ರತೆ ನೀಡುವುದರ ಬದಲು ಬಿಜೆಪಿ ಸರ್ಕಾರಗಳು ಅಪರಾಧಿಗಳ ಪರ ವಹಿಸುತ್ತಿವೆ. ಸರ್ಕಾರಗಳ ಸಂಸ್ಥೆಗಳನ್ನು ಬಳಸಿಕೊಂಡು ತುಳಿತಕ್ಕೊಳಗಾದ ಕುಟುಂಬಗಳ ಧ್ವನಿಯನ್ನು ಅಡಗಿಸಲಾಗುತ್ತಿದೆ ಎಂದು ಸೋನಿಯಾ ಗಾಂಧಿ ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!