ಸಂಗ್ರಹ ಚಿತ್ರ 
ದೇಶ

ಸಗಣಿಯಿಂದ ಮಾಡಿದ ಚಿಪ್ ಮೊಬೈಲ್ ರೇಡಿಯೇಷನ್ ಕಡಿಮೆ ಮಾಡುತ್ತದೆ ಎಂಬುದನ್ನು ಸಾಬೀತುಪಡಿಸಿ: ವಿಜ್ಞಾನಿಗಳ ಸವಾಲು

ದನದ ಸಗಣಿಯಿಂದ ಮಾಡಿದ ಚಿಪ್ ಮೊಬೈಲ್ ರೇಡಿಯೇಷನ್'ನ್ನು ಕಡಿಮೆ ಮಾಡುತ್ತದೆ ಎಂಬ ನಿಮ್ಮ ಹೇಳಿಕೆಯನ್ನು ಸಾಬೀತುಪಡಿಸಿ ಎಂದು 600ಕ್ಕೂ ಹೆಚ್ಚು ವಿಜ್ಞಾನಿಗಳು ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭ ಭಾಯಿ ಕಥಿರಿಯಾ ಅವರಿಗೆ ಪತ್ರ ಬರೆದಿದ್ದಾರೆ.

ನವದೆಹಲಿ: ದನದ ಸಗಣಿಯಿಂದ ಮಾಡಿದ ಚಿಪ್ ಮೊಬೈಲ್ ರೇಡಿಯೇಷನ್'ನ್ನು ಕಡಿಮೆ ಮಾಡುತ್ತದೆ ಎಂಬ ನಿಮ್ಮ ಹೇಳಿಕೆಯನ್ನು ಸಾಬೀತುಪಡಿಸಿ ಎಂದು 600ಕ್ಕೂ ಹೆಚ್ಚು ವಿಜ್ಞಾನಿಗಳು ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭ ಭಾಯಿ ಕಥಿರಿಯಾ ಅವರಿಗೆ ಪತ್ರ ಬರೆದಿದ್ದಾರೆ.

ಇಂಡಿಯಾ ಮಾರ್ಚ್ ಫಾರ್ ಸೈನ್ಸ್ ನ ಮುಂಬೈ ಅಧ್ಯಾಯದ ಹೇಳಿಕೆಯೊಂದರಲ್ಲಿ, ದನದ ಸಗಣಿಯಿಂದ ಮಾಡಿದ ಚಿಪ್ ಮೊಬೈಲ್ ರೇಡಿಯೇಷನ್'ನ್ನು ಕಡಿಮೆ ಮಾಡುತ್ತದೆ ಎಂಬುದನ್ನು ಯಾವ ವಿಜ್ಞಾನಿಗಳು, ಎಲ್ಲಿ ಪ್ರಯೋಗಗಳನ್ನು ನಡೆಸಿದ್ದಾರೆ. ಅಧ್ಯಯನದ ಪ್ರಮುಖ ಸಂಶೋಧಕರು ಯಾರು, ಸಂಶೋಧನೆಯ ವರದಿಯನ್ನು ಎಲ್ಲಿ ಪ್ರಕಟಿಸಲಾಗಿದೆ ಎಂಬೆಲ್ಲಾ ಮಾಹಿತಿಗಳನ್ನು ನೀಡಿ ಎಂದು ವಿಜ್ಞಾನಿಗಳು ಕೇಳಿದ್ದಾರೆ.

ಕಳೆದ ವಾರವಷ್ಟೇ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭ್‌ಭಾಯಿ ಕಥಿರಿಯಾ ಅವರು, ದನದ ಸಗಣಿಯಿಂದ ತಯಾರಿಸಿದ ಚಿಪ್‌ನ್ನು ಬಿಡುಗಡೆಗೊಳಿಸಿದ್ದರು. ಬಳಿಕ ಇದರ ಬಳಕೆಯಿಂದ ಮೊಬೈಲ್‌ ಹ್ಯಾಂಡ್‌ಸೆಟ್‌ಗಳಿಂದ ಹೊರಸೂಸುವ ರೇಡಿಯೇಷನ್‌ (ವಿಕಿರಣ) ತಡೆಯಬಹುದು ಎಂದು ಹೇಳಿದ್ದರು. 

"ಸಗಣಿ ಎಲ್ಲರನ್ನೂ ರಕ್ಷಿಸುತ್ತದೆ. ಇದು ವಿಕಿರಣ ವಿರೋಧಿಯಾಗಿದ್ದು ವೈಜ್ಞಾನಿಕವಾಗಿ ಸಾಬೀತಾಗಿದೆ. ಇದೊಂದು ರೇಡಿಯೇಷನ್‌ ಚಿಪ್‌ ಆಗಿದ್ದು, ಮೊಬೈಲ್‌ ಫೋನ್‌ಗಳ ರೇಡಿಯೇಷನ್‌ ತಡೆಯಲು ಇವನ್ನು ಮೊಬೈಲ್‌ನಲ್ಲಿ ಬಳಸಬಹುದು. ಖಾಯಿಲೆಗಳಿಂದಲೂ ಇದು ರಕ್ಷಿಸಲಿದೆ ಎಂದು ತಿಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT