ಸುಪ್ರೀಂ ಕೋರ್ಟ್ 
ದೇಶ

ಪ್ರಾಣಿ ಬಲಿ ನಿರ್ಬಂಧಿಸಿದ್ದ ಒಡಿಶಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ 

ಒಡಿಶಾದಲ್ಲಿ ವಾರ್ಷಿಕವಾಗಿ ನಡೆಯುವ ಚತಾರ್ ಯಾತ್ರದಲ್ಲಿ ಪ್ರಾಣಿಬಲಿಯನ್ನು ನಿರ್ಬಂಧಿಸಿ ಒಡಿಶಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 

ನವದೆಹಲಿ: ಒಡಿಶಾದಲ್ಲಿ ವಾರ್ಷಿಕವಾಗಿ ನಡೆಯುವ ಚತಾರ್ ಯಾತ್ರದಲ್ಲಿ ಪ್ರಾಣಿಬಲಿಯನ್ನು ನಿರ್ಬಂಧಿಸಿ ಒಡಿಶಾ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 

ಕಾಳಹಂಡಿ ಜಿಲ್ಲೆಯಲ್ಲಿ ಚತಾರ್ ಯಾತ್ರಾ ಹಬ್ಬದ ಭಾಗವಾಗಿ ಪ್ರಾಣಿ ಬಲಿ ಪದ್ಧತಿ ಇದೆ. ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಎಸ್ಎ ಬೋಬ್ಡೆ ಹಾಗೂ ನ್ಯಾ. ಎಎಸ್ ಬೋಪಣ್ಣ ಹಾಗು ರಾಮಸುಬ್ರಹ್ಮಣಿಯನ್ ಅವರಿದ್ದ ಪೀಠ ಒಡಿಶಾ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್ ಆದೇಶವನ್ನು ಭವಾನಿ ಶಂಕರ್ ನೈಲ್ ಅವರು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 

ಪ್ರಾಣಿಬಲಿಯನ್ನು ಖಂಡಿಸಿದ್ದ ಹೈಕೋರ್ಟ್, ಮೌಢ್ಯದ ಆಚರಣೆಯಾಗಿರುವ ಪ್ರಾಣಿಬಲಿ ನಡೆಯದಂತೆ ಜಿಲ್ಲಾಡಳಿತ ಜನಜಾಗೃತಿ ಮೂಡಿಸಬೇಕೆಂದು ಹೇಳಿತ್ತು. 

ಮಣಿಕೇಶ್ವರಿ ದೇವರನ್ನು ಸಂಪ್ರೀತಗೊಳಿಸಲು ಪ್ರಾಣಿ ಬಲಿ ನಡೆಯುತ್ತಿದ್ದು, ಮಕ್ಕಳ ರಕ್ತವನ್ನು ನೋಡಲು ಹೇಗೆ ಪೋಷಕರು ಬಯಸುವುದಿಲ್ಲವೋ ಅದೇ ರೀತಿಯಲ್ಲಿ ದೇವರೂ ಸಹ ತನ್ನ ಮಕ್ಕಳಂತೆ ಇರುವ ಪ್ರಾಣಿಗಳ ಬಲಿಯನ್ನು ಬಯಸುವುದಿಲ್ಲ ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT