ಉಷಾ ಠಾಕೂರ್ 
ದೇಶ

ಕಾಶ್ಮೀರವನ್ನು ಭಯೋತ್ಪಾದನಾ ಕಾರ್ಖಾನೆ ಮಾಡುತ್ತಿರುವುದೇ ಮದರಸಾಗಳು: ಮಧ್ಯ ಪ್ರದೇಶ ಸಚಿವೆ

ಮದರಸಾಗಳು ಭಯೋತ್ಪಾದಕರನ್ನು ಹುಟ್ಟುಹಾಕುತ್ತಿದ್ದು, ಈ ಹಿನ್ನಲೆಯಲ್ಲಿ ಮದರಸಾಗಳಿಗೆ ನೀಡಲಾಗುತ್ತಿರುವ ಸರ್ಕಾರದ ಆರ್ಥಿಕ ನೆರವನ್ನು ಸ್ಥಗಿತಗೊಳಿಸಬೇಕೆಂದು ಮಧ್ಯಪ್ರದೇಶ ಸಚಿವೆ ಉಷಾ ಠಾಕೂರ್ ಅವರು ಹೇಳಿದ್ದಾರೆ. 

ಇಂದೋರ್: ಮದರಸಾಗಳು ಭಯೋತ್ಪಾದಕರನ್ನು ಹುಟ್ಟುಹಾಕುತ್ತಿದ್ದು, ಈ ಹಿನ್ನಲೆಯಲ್ಲಿ ಮದರಸಾಗಳಿಗೆ ನೀಡಲಾಗುತ್ತಿರುವ ಸರ್ಕಾರದ ಆರ್ಥಿಕ ನೆರವನ್ನು ಸ್ಥಗಿತಗೊಳಿಸಬೇಕೆಂದು ಮಧ್ಯಪ್ರದೇಶ ಸಚಿವೆ ಉಷಾ ಠಾಕೂರ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಹುತೇಕ ಉಗ್ರರು ಮದರಸಾದಲ್ಲಿಯೇ ಅಧ್ಯಯನ ಮಾಡಿ ಹೊರಬಂದವರಾಗಿರುತ್ತಾರೆ. ಜಮ್ಮು ಮತ್ತು ಕಾಶ್ಮೀರವನ್ನು ಭಯೋತ್ಪಾದಕರ ಕಾರ್ಖಾನೆಯನ್ನಾಗಿ ಮಾಡಲಾಗುತ್ತಿದೆ. ರಾಷ್ಟ್ರೀಯತೆಯನ್ನು ಅನುಸರಿಸಲು ಸಾಧ್ಯವಾಗದ ಮದರಸಾಗಳು, ಸಮಾಜದ ಸಂಪೂರ್ಣ ಪ್ರಗತಿಗಾಗಿ ಮದರಸಾಗಳನ್ನು ದೇಶದಲ್ಲಿ ಅಸ್ತಿತ್ವದಲ್ಲಿರುವ ಶಿಕ್ಷಣ ವ್ಯವಸ್ಥೆಯೊಂದಿಗೆ ವಿಲೀನಗೊಳಿಸಬೇಕೆಂದು ಹೇಳಿದ್ದಾರೆ. 

ನೀವು ಈ ದೇಶದ ಪ್ರಜೆಯಾಗಿದ್ದರೆ,  ಉಗ್ರರು, ಭಯೋತ್ಪಾದಕರು ಮದರಸಾಗಳಲ್ಲಿ ಕಲಿತಿರುವುದನ್ನು ಗಮನಿಸಬಹುದು. ಈ ಮದರಸಾಗಳು ವಿದ್ಯಾರ್ಥಿಗಳಿಗೆ ರಾಷ್ಟ್ರೀಯತೆಯನ್ನು ಕಲಿಸುವುದಿಲ್ಲ. ಮದರಸಾಗಳನ್ನು ಸದ್ಯ ಅಸ್ತಿತ್ವದಲ್ಲಿರುವ ಶಿಕ್ಷಣ ವ್ಯವಸ್ಥೆಯೊಂದಿಗೆ ವಿಲೀನಗೊಳಿಸಿದರೆ ಮಾತ್ರ ಸಮಾಜದ ಸಂಪೂರ್ಣ ಪ್ರಗತಿ ಸಾಧಿಸಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ. 

ಸರ್ಕಾರವು ಸಾರ್ವಜನಿಕ ಹಣದಿಂದ ಧಾರ್ಮಿಕ ಶಿಕ್ಷಣವನ್ನು ಕಲಿಸಲು ಅವಕಾಶ ನೀಡುವುದಿಲ್ಲ. ಹೀಗಾಗಿ ಸರ್ಕಾರಿ ಮದರಸಾ ಮತ್ತು ಸಂಸ್ಕೃತ ಶಾಲೆಗಳನ್ನು ಮುಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ನವೆಂಬರ್‌ನಲ್ಲಿ ಸರ್ಕಾರ ಔಪಚಾರಿಕ ಅಧಿಸೂಚನೆ ಹೊರಡಿಸುವುದಾಗಿ ಅಕ್ಟೋಬರ್ 9 ರಂದು ಅಸ್ಸಾಂ ಶಿಕ್ಷಣ ಮತ್ತು ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT