ಏಕನಾಥ್ ಖಡ್ಸೆ 
ದೇಶ

ಬಿಜೆಪಿ ನಾಯಕ ಏಕನಾಥ್ ಖಡ್ಸೆ ಎನ್ ಸಿಪಿ ಸೇರುತ್ತಾರೆ: ಮಹಾ ಸಚಿವ ಜಯಂತ್ ಪಾಟೀಲ್

ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

ಮುಂಬೈ: ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

"ಅವರು (ಖಡ್ಸೆ) ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಎನ್‌ಸಿಪಿಗೆ ಸೇರಲಿದ್ದಾರೆ. ಅವರ ಸೇರ್ಪಡೆ ಎನ್‌ಸಿಪಿಯನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಖಡ್ಸೆ ಅವರು ಭ್ರಷ್ಟಾಚಾರದ ಆರೋಪದ ಮೇಲೆ 2016 ರಲ್ಲಿ ಅಂದಿನ ಬಿಜೆಪಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಿನಿಂದಲೂ ಅವರು ತೀವ್ರ ಬೇಸರದಲ್ಲಿದ್ದರು.

ಕಳೆದ ಕೆಲವು ದಿನಗಳಿಂದ ಖಾಡ್ಸೆ ಅವರು ಬಿಜೆಪಿ ತೊರೆದು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸೇರಬಹುದು ಎಂಬ ಉಹಾಪೋಹಗಳು ಇದ್ದವು. ಇದೀಗ ಅದು ನಿಜವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಮಮತಾ ಬಣಕ್ಕೆ ಮತ್ತೊಂದು ಆಘಾತ; ನಾಮಪತ್ರ ವಾಪಸ್ ಪಡೆದ ನಂದಿಗ್ರಾಮ ಅಭ್ಯರ್ಥಿ!

ಬೆಂಗಳೂರು: ಫೋನ್‌ ರಿಸೀವ್‌ ಮಾಡ್ಲಿಲ್ಲ ಅಂತ ಪತ್ನಿ ಕೊಲೆ; ಆರೋಪಿ ಪತಿ ಬಂಧನ! ಅಪ್ಪ, ಅಮ್ಮ ಇಲ್ಲದೆ ಅನಾಥರಾದ ಮಕ್ಕಳು

ಪಾಕಿಸ್ತಾನ: ಖೈಬರ್ ಪಖ್ತುಂಕ್ವಾದ ಪೊಲೀಸ್ ಕೇಂದ್ರದ ಬಳಿ ಕಾರು ಬಾಂಬ್ ಸ್ಫೋಟ; 16 ಮಂದಿ ಸಾವು