ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ನಮ್ಮ ಪೊಲೀಸ್ ಸಿಬ್ಬಂದಿಗಳು ಯಾವುದೇ ಹಿಂಜರಿಕೆಯಿಲ್ಲದೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ: ಪ್ರಧಾನಿ ಮೋದಿ

ಪೊಲೀಸ್ ಸಂಸ್ಮರಣಾ ದಿನವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ. 

ನವದೆಹಲಿ: ಪೊಲೀಸ್ ಸಂಸ್ಮರಣಾ ದಿನವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ. 

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದರಿಂದ ಹಿಡಿದು ಭಯಾನಕ ಅಪರಾಧ ಪ್ರಕರಣಗಳನ್ನು ಬಗೆಹರಿಸುವವರೆಗೆ, ವಿಪತ್ತು ನಿರ್ವಹಣೆಗೆ ಸಹಾಯ ಮಾಡುವುದರಿಂದ ಹಿಡಿದು ಕೋವಿಡ್-19 ವಿರುದ್ಧ ಹೋರಾಡುವವರೆಗೆ, ಯಾವುದೇ ಹಿಂಜರಿಕೆಯಿಲ್ಲದೆ ನಮ್ಮ ಪೊಲೀಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಜನ ಸೇವೆಯತ್ತ ಅವರ ಸಮರ್ಪಣೆ ಮತ್ತು ಸರ್ವ ಸನ್ನದ್ಧತೆಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ. 

ಪೊಲೀಸ್ ಸಂಸ್ಮರಣಾ ದಿನವು ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಭಾರತದಾದ್ಯಂತ ಕೃತಜ್ಞತೆ ಸಲ್ಲಿಸುವ ಅವಕಾಶವಾಗಿದೆ. ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ತ್ಯಾಗ ಮತ್ತು ಸೇವೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದು ತಿಳಿಸಿದ್ದಾರೆ. 

ಈ ನಡುವೆ ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ಇಂದು ಬೆಳಿಗ್ಗೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಗೃಹ ಸಚಿವ ಅಮಿತ್ ಶಾ ಗೌರವ ಸಲ್ಲಿಸಿದ್ದಾರೆ. 

ರಾಷ್ಟ್ರಕ್ಕಾಗಿ ಪೊಲೀಸ್ ಸಿಬ್ಬಂದಿಯ ನಿಷ್ಠೆ ಮತ್ತು ಸರ್ವೋಚ್ಚ ತ್ಯಾಗವನ್ನು ಗೌರವಿಸಲು ಪ್ರತಿ ವರ್ಷ ಅಕ್ಟೋಬರ್ 21 ರಂದು ಈ ದಿನವನ್ನು ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Exit polls ಮೇಲೆ ನನಗೆ ನಂಬಿಕೆ ಇಲ್ಲ: ಅದೊಂದು ಜಾಲ- ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿ!

ರಜತ್ ಪಾಟಿದಾರ್ ಔಟ್ ವಿವಾದ: ಚೆಂಡು ನೆಲಕ್ಕೆ ತಾಗಿದ್ದರೂ ಅಂಪೈರ್ ಎಡವಟ್ಟು; Virat Kohli ಆಕ್ರೋಶ, Video!

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್​​ಪೆಕ್ಟರ್ ರಫೀಕ್​​ ಅಮಾನತು!

'ಅಮೆರಿಕನ್ನರಿಗೆ ಗಲ್ಫ್ ನೀರಿನ ಕೆಳಭಾಗವೇ ಗತಿ': 'ಪರಮಾಣು, ಕ್ಷಿಪಣಿ ಸಾಮರ್ಥ್ಯ' ರಕ್ಷಣೆಗೆ ಬದ್ಧ- ಖಮೇನಿ ಪ್ರತಿಜ್ಞೆ

SCROLL FOR NEXT