ಇ ಪಳನಿಸ್ವಾಮಿ 
ದೇಶ

ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತ ವಿತರಣೆ: ಸಿಎಂ ಪಳನಿ ಸ್ವಾಮಿ ಘೋಷಣೆ

ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೋನ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ತಿರುಚ್ಚಿ: ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೋನ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ಪುದುಕ್ಕೊಟ್ಟೈನಲ್ಲಿ ಇಂದು ವಿವಿಧ  ಸರ್ಕಾರಿ ಕಲ್ಯಾಣ ಯೋಜನೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಕೊರೋನಾ ಲಸಿಕೆ ಬಳಕೆಗೆ ಸಿಕ್ಕ ಬಳಿಕ, ತಮಿಳುನಾಡು ಸರ್ಕಾರವು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತದೆ  ಎಂದು ಹೇಳಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಪಳನಿಸ್ವಾಮಿ, ಕೊರೋನಾ ಅವಧಿಯಲ್ಲಿ ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಜಾಗೃತಿ ಅಭಿಯಾನದ ಕುರಿತು ಮಾಹಿತಿ ನೀಡಿದರು.

ಇತ್ತೀಚೆಗಷ್ಟೇ ಬಿಹಾರ ಉಪ ಚುನಾವಣೆ ನಿಮಿತ್ತ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೋನಾ ಲಸಿಕೆ ನೀಡುವ ಕುರಿತು ಘೋಷಣೆ ಮಾಡಿತ್ತು. ಬಿಹಾರ ಬಿಜೆಪಿ ಬೆನ್ನಲ್ಲೇ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಕೂಡ ಅದೇ ಹಾದಿಯಲ್ಲೇ ಸಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT