ತೇಜಸ್ವಿ ಯಾದವ್ 
ದೇಶ

ಮಾನಸಿಕವಾಗಿ, ದೈಹಿಕವಾಗಿ ದಣಿದಿರುವ ನಿತೀಶ್ ಕುಮಾರ್ ಗೆ ಬಿಹಾರ ನಿರ್ವಹಣೆ ಸಾಧ್ಯವಿಲ್ಲ: ತೇಜಸ್ವಿ ಯಾದವ್

ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾನಸಿಕವಾಗಿ ಹಾಗೂ ದೈಹಿಕವಾಗಿ ದಣಿದಿದ್ದು ಬಿಹಾರವನ್ನು ಸಮರ್ಥವಾಗಿ ನಿರ್ವಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ.

ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾನಸಿಕವಾಗಿ ಹಾಗೂ ದೈಹಿಕವಾಗಿ ದಣಿದಿದ್ದು ಬಿಹಾರವನ್ನು ಸಮರ್ಥವಾಗಿ ನಿರ್ವಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಬಿಹಾರ ನೈಸರ್ಗಿಕ ವಿಕೋಪ ಸಂಭವಿಸಿದಾಗ ಸಿಎಂ ನಿತೀಶ್ ಕುಮಾರ್ ಎಲ್ಲಿದ್ದರು  ಎಂದು ಎಲ್ಲರೂ ಪ್ರಶ್ನಿಸುತ್ತಿದ್ದರು ಎಂದು ಟೀಕಿಸಿದ್ದಾರೆ.

ಕಳೆದ 15 ವರ್ಷಗಳಲ್ಲಿ ಯಾವುದೇ ಉದ್ಯೋಗವಕಾಶ ಸೃಷ್ಟಿಯಾಗಿಲ್ಲ,  ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ, ವಲಸಿಗರ ಸಂಖ್ಯೆ ಹೆಚ್ಚಿದೆ, ಬಡತನದ ಪ್ರಮಾಣ ಮತ್ತಷ್ಟು ಏರಿಕೆಯಾಗುತ್ತಿದೆ, ಪರಿಸ್ಥಿತಿ ಹೀಗಿರುವಾಗ ಯಾವ ಆಧಾರದ ಮೇಲೆ ಅವರು ಮತ ಕೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

50ನೇ ವಯಸ್ಸಿಗೆ ಸರ್ಕಾರಿ ನೌಕರರ ನಿವೃತ್ತಿ ನೋಟಿಫಿಕೇಷನ್ ರದ್ದು ಪಡಿಸುವುದಾಗಿ ಯಾದವ್ ತಿಳಿಸಿದ್ದಾರೆ. ಮತದಾರರಿಗೆ ಆರೋಗ್ಯ ವಿಮೆ ಮಾಡಿಸಿಕೊಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದಾಗಿ ತೇಜಸ್ವಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT