ಪ್ರಧಾನಿ ನರೇಂದ್ರ ಮೋದಿ 
ದೇಶ

ಕೊರೋನಾ ನಿರ್ವಹಣೆಯಲ್ಲಿ ವಿಫಲವಾದರೂ ಈಗಲೂ ಪ್ರಧಾನಿ ಮೋದಿ ಜನಪ್ರಿಯತೆಗೆ ಕಾರಣ ಏನು ಗೊತ್ತಾ?

ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯ ಕೊರೋನಾ ವೈರಸ್ ಪ್ರಕರಣಗಳು ದೇಶದಲ್ಲಿದ್ದು, ಆರ್ಥಿಕತೆ ಕುಸಿತಗೊಂಡಿದ್ದು, ಕಾರ್ಖಾನೆಗಳು ಮುಚ್ಚಿದ್ದು, ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ಚೀನಾದೊಂದಿಗೆ ಗಡಿ ವಿವಾದ ಮುಂದುವರೆದಿದೆ. ಆದಾಗ್ಯೂ , ಪ್ರಧಾನಿ ಮೋದಿ ಈಗಲೂ ಕೂಡಾ ಜನಪ್ರಿಯರಾಗಿದ್ದಾರೆ.

ನವದೆಹಲಿ: ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯ ಕೊರೋನಾ ವೈರಸ್ ಪ್ರಕರಣಗಳು ದೇಶದಲ್ಲಿದ್ದು, ಆರ್ಥಿಕತೆ ಕುಸಿತಗೊಂಡಿದ್ದು, ಕಾರ್ಖಾನೆಗಳು ಮುಚ್ಚಿದ್ದು, ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ಚೀನಾದೊಂದಿಗೆ ಗಡಿ ವಿವಾದ ಮುಂದುವರೆದಿದೆ. ಆದಾಗ್ಯೂ , ಪ್ರಧಾನಿ ಮೋದಿ ಈಗಲೂ ಕೂಡಾ ಜನಪ್ರಿಯರಾಗಿದ್ದಾರೆ.

ಅಕ್ಟೋಬರ್ 28 ರಿಂದ ನವೆಂಬರ್ 7ರವರೆಗೂ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ ಪೂರ್ವ ಸಮೀಕ್ಷೆಯಲ್ಲಿ ಇದು ದೃಢಪಟ್ಟಿದೆ. ಸಾಂಕ್ರಾಮಿಕ ರೋಗ ಉಲ್ಬಣದ ನಂತರ ಮೊದಲ ಬಾರಿಗೆ ಬಿಹಾರದಲ್ಲಿ ಚುನಾವಣೆ ನಡೆಯುತ್ತಿದ್ದು, ಎನ್ ಡಿಎ ಮೈತ್ರಿ ಪಕ್ಷ ಜೆಡಿಯು ಮರಳಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಇಂಡಿಯಾ ಟುಡೇ ಆಗಸ್ಟ್ ನಲ್ಲಿ  ಪ್ರತ್ಯೇಕವಾಗಿ ನಡೆಸಿದ ಸಮೀಕ್ಷೆಯಲ್ಲಿ  ಕಾರ್ಯಕ್ಷಮತೆ  ಅತ್ಯುತ್ತಮವಾಗಿದ್ದು, ಶೇ. 78 ರಷ್ಟು ರೆಟಿಂಗ್ ಸಿಕ್ಕಿದೆ.

ಮಧ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ಕೆಲ ವ್ಯಕ್ತಿಗಳು ಸರ್ಕಾರಿ ಪ್ರಯೋಜನಗಳನ್ನು ಪಡೆದುಕೊಳ್ಳಲು ಆಗುತ್ತಿಲ್ಲ. ಅದು ಪ್ರಧಾನಿ ಮೋದಿ ಅವರ ತಪ್ಪಲ್ಲ, ಜನರು ಮಾಸ್ಕ್ ಧರಿಸದಿದ್ದರೆ ಸೋಂಕು ಹರಡುವಿಕೆ ತಪ್ಪಿಸಲು ಮೋದಿಯಿಂದ ಸಾಧ್ಯವಾಗಲ್ಲ, ಅವರ ಒಳ್ಳೆಯ ಕಾರ್ಯಕ್ರಮಗಳನ್ನು ಯಾರು ಕೂಡಾ ಪ್ರಶ್ನಿಸಿಲು ಸಾಧ್ಯವಿಲ್ಲ ಎನ್ನುತ್ತಾರೆ 22 ವರ್ಷದ ತರುಣ ಸಂಜಯ್ ಕುಮಾರ್. 

ಈತ ಲಾಕ್ ಡೌನ್ ಸಂದರ್ಭದಲ್ಲಿ  ನಿಯಮ ಉಲ್ಲಂಘಿಸಿ ಕೆಲಸವಿಲ್ಲದೆ ದೆಹಲಿಯಿಂದ ಬಿಹಾರಕ್ಕೆ 1 ಸಾವಿರ ಕಿಲೋಮೀಟರ್ ಸೈಕಲ್ ತುಳಿದು ಬಂದಿದ್ದಾನೆ. ಸಾಲ , ರಾಜ್ಯ ಸರ್ಕಾರ, ಮತ್ತಿತರ ವಿಷಯಗಳಲ್ಲಿ ಪ್ರಧಾನಿಯನ್ನು ದೂಷಿಸಿದ್ದರೂ ಅಡುಗೆ ಅನಿಲ ಪೂರೈಕೆ, ಶೌಚಾಲಯ, ಮನೆ, ಮತ್ತಿತರ ಕಾರ್ಯಕ್ರಮಗಳ ಮೂಲಕ ಪ್ರಧಾನಿ ಮೋದಿ ನೆರವು ನೀಡಿದ್ದಾರೆ ಎಂದು ಅನೇಕ ಮಂದಿ ಹೇಳುತ್ತಾರೆ.

ಪ್ರಬಲವಾದ ವಿರೋಧ ಪಕ್ಷದ ಕೊರತೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ದಿನ ಜನಪ್ರಿಯತೆ ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಅಂತರರಾಷ್ಟ್ರೀಯ ಶಾಂತಿಗಾಗಿ ಕಾರ್ನೆಗೀ ದತ್ತಿ ದಕ್ಷಿಣ ಏಷ್ಯಾ ಕಾರ್ಯಕ್ರಮದ ನಿರ್ದೇಶಕ ಮಿಲನ್ ವೈಷ್ಣವ್ ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT