ಜೈ ಶಂಕರ್ 
ದೇಶ

ಸೊಮಾಲಿಯಾದಲ್ಲಿ ಸಿಲುಕಿರುವ 33 ಭಾರತೀಯರನ್ನು ಕರೆತರಲು ಯತ್ನ: ಜೈಶಂಕರ್

ಸೊಮಾಲಿಯಾದಲ್ಲಿ ಸಿಲುಕಿರುವ 33 ಭಾರತೀಯರನ್ನು ತಾಯ್ನಾಡಿಗೆ ವಾಪಸ್‌ ಕರೆತರಲು ಪ್ರಯತ್ನಗಳನ್ನು ಮಾಡುತ್ತಿದ್ದು ನೈರೊಬಿಯಲ್ಲಿನ ರಾಜತಾಂತ್ರಿಕ ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಹೇಳಿದ್ದಾರೆ.

ನವದೆಹಲಿ: ಸೊಮಾಲಿಯಾದಲ್ಲಿ ಸಿಲುಕಿರುವ 33 ಭಾರತೀಯರನ್ನು ತಾಯ್ನಾಡಿಗೆ ವಾಪಸ್‌ ಕರೆತರಲು ಪ್ರಯತ್ನಗಳನ್ನು ಮಾಡುತ್ತಿದ್ದು ನೈರೊಬಿಯಲ್ಲಿನ ರಾಜತಾಂತ್ರಿಕ ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಹೇಳಿದ್ದಾರೆ.

ಕಳೆದ ಎಂಟು ತಿಂಗಳಿನಿಂದ ಉತ್ತರ ಪ್ರದೇಶದ 25 ಕಾರ್ಮಿಕರು ಸೇರಿದಂತೆ 33 ಭಾರತೀಯರನ್ನು ಸೊಮಾಲಿಯಾದ ಕಂಪನಿಯೊಂದು ಒತ್ತೆಯಾಗಿರಿಸಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.

10 ತಿಂಗಳ ಹಿಂದೆ 33 ಭಾರತೀಯ ಕಾರ್ಮಿಕರು ಈ ಕಂಪನಿಗೆ ಸೇರ್ಪಡೆಯಾಗಿದ್ದರು. ಮೊದಲ ಎರಡು ತಿಂಗಳು ಅವರೊಂದಿಗೆ ಉತ್ತಮವಾಗಿ ವ್ಯವಹರಿಸಲಾಗುತ್ತಿತ್ತು. ಎರಡು ತಿಂಗಳ ಬಳಿಕ ವೇತನವನ್ನೂ ನೀಡದೆ ತೊಂದರೆ ಕೊಡುತ್ತಿದ್ದಾರೆ ಎನ್ನಲಾಗಿದೆ.

ಸೊಮಾಲಿಯಾದ ಮೊಗದಿಶುವಿನಲ್ಲಿ ಸಿಲುಕಿರುವ 33 ಭಾರತೀಯ ಕಾರ್ಮಿಕರಿಗೆ ಪರಿಹಾರ ಒದಗಿಸಲು ಹಾಗೂ ಅವರನ್ನು ಭಾರತಕ್ಕೆ ವಾಪಸ್‌ ಕರೆತರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ನೈರೊಬಿಯಲ್ಲಿನ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಭಾರತದಲ್ಲಿರುವ ಸೊಮಾಲಿಯಾದ ರಾಯಭಾರ ಕಚೇರಿಯೊಂದಿಗೆ ಈ ಬಗ್ಗೆ ಮಾತುಕತೆ
ನಡೆಸಲಾಗುತ್ತಿದೆ’ ಎಂದು ಜೈಶಂಕರ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT